ಗಂಗಾವತಿ | ಅನೈತಿಕ ಚಟುವಟಿಕೆಗಳ ತಾಣವಾದ ನೆಹರೂ ಉದ್ಯಾನವನ; ಸ್ವಚ್ಛತೆಗೆ ಮುಂದಾದ ಸಮಾನ ಮನಸ್ಕರು

Date:

Advertisements

ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ ನಗರಸಭೆ ಮಾಡಬೇಕಿದ್ದ ಉದ್ಯಾನವನದ ಸ್ವಚ್ಛತೆ ಕೆಲಸವನ್ನು ಪರಿಸರವಾದಿಗಳು, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರು ಮಾಡಲು ಮುಂದಾದರು.

ಗಂಗಾವತಿಯ ಚಾರಣ ಬಳಗ, ರೋಟರಿ ಕ್ಲಬ್, ಕಟ್ಟಡ ನಿರ್ಮಾಣ ಸಂಘ, ಪರಿಸರ ಸೇವಾ ಟ್ರಸ್ಟ್ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಒಟ್ಟಾಗಿ ಸ್ವಚ್ಛತೆಗೆ ಅಗತ್ಯ ಇರುವ ಪರಿಕರಗಳನ್ನೂ ತಂದು ಉದ್ಯಾನವನದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿದರು.

ಡಾ. ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ, “ನಗರಕ್ಕೆ ಇರುವುದು ಒಂದೇ ಇದೊಂದೇ ಉದ್ಯಾನವನ. ನಗರಸಭೆಯ ನಿರ್ಲಕ್ಷ್ಯತೆ ಹಾಗೂ ಸಮರ್ಪಕವಾದ ನಿರ್ವಹಣೆಯ ಕೊರತೆಯಿಂದಾಗಿ ಉದ್ಯಾನವನ ಸಂಪೂರ್ಣ ಹದಗೆಟ್ಟಿದೆ” ಎಂದರು.

Advertisements

ಟಿ ಆಂಜನೇಯ ಮಾತನಾಡಿ, “ಒಂದು ಕಾಲದಲ್ಲಿ ಸದಾ ಹಚ್ಚ ಹಸಿರಿನಿಂದ ಕೂಡಿದ, ಕಾರಂಜಿಯಿಂದ ಕಂಗೊಳಿಸುತ್ತಿದ್ದ ಹಾಗೂ ಉದ್ಯಾನವನಕ್ಕೆ ಆಗಮಿಸುವ ಜನರಿಗೆ ಟಿವಿ ಸಹಿತ ವೀಕ್ಷಣೆಗೆ ಅವಕಾಶ ನೀಡುತ್ತಿದ್ದ ನೆಹರು ಉದ್ಯಾನವನ ಈಗ ಕಸದ ಕೊಂಪೆಯಾಗಿದೆ. ಆಳವಾದ ತಗ್ಗು ಗುಂಡಿಗಳಿಂದ ನೀರು ಸಂಗ್ರಹಗೊಂಡು ಸಾಂಕ್ರಾಮಿಕ ರೋಗಗಳ ಮೂಲ ಕೇಂದ್ರವಾಗಿದೆ. ಈ ಹಿನ್ನೆಲೆ ನಗರಸಭೆಯ ಪೌರಾಯುಕ್ತರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರುಗಳು ಉದ್ಯಾನವನದ ಸ್ವಚ್ಛತೆಗೆ ಮುಂದಾಗಬೇಕು. ಬೆಳಗ್ಗೆ ಸೇರಿದಂತೆ ಸಂಜೆ ಸಮಯ ನಿಗದಿಪಡಿಸಿ ಅಚ್ಚುಕಟ್ಟಿನ ನಿರ್ವಹಣೆಗಾಗಿ ಸಿಬ್ಬಂದಿಯನ್ನು ನೇಮಿಸಬೇಕು. ಬೇಸಿಗೆ ಹಾಗೂ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸೌಂದರ್ಯೀರಣಕ್ಕೆ ವಿಶೇಷ ಅನುದಾನ ಕಲ್ಪಿಸಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಸಮಾನ ಮನಸ್ಕರಿಂದ ನಡೆದ ಪರಿಸರ ಸ್ವಚ್ಛತಾ ಕಾರ್ಯಕ್ರಮ ವಿಶೇಷ ಗಮನ ಸೆಳೆಯುವುದರ ಜೊತೆಗೆ ಅಧಿಕಾರಿ ವರ್ಗಕ್ಕೆ ಬಿಸಿ ಮುಟ್ಟಿಸುವಂತಿತ್ತು.

ಇದನ್ನೂ ಓದಿ: ಗಂಗಾವತಿ | ನೆಹರೂ ಉದ್ಯಾನದ ಸ್ವಚ್ಛತೆ ಕುರಿತು ಶಾಸಕರ ಮಾತಿಗೂ ಕಿಮ್ಮತ್ತು ನೀಡದ ಪೌರಾಯುಕ್ತ: ಐಲಿ ನಾಗರಾಜ

ಈ ವೇಳೆ ಡಾ. ಶಿವಕುಮಾರ್ ಮಾಲಿ ಪಾಟೀಲ್, ಆಂಜನೇಯ, ತಾಲೂಕ ಪಂಚಾಯತಿ ಮಾಜಿ ಅಧ್ಯಕ್ಷ ರಫೀಕ್, ಮಂಜುನಾಥ್ ಗುಡ್ಲಾನೂರು, ಪಂಪಾಪತಿ ಇಂಗಳಗಿ, ಸೌಮ್ಯ ಸೇರಿದಂತೆ ಚಿಕ್ಕ ಮಕ್ಕಳು ಸಹ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X