ಬೀದರ್‌ | ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಿ : ಡಿಸಿ ಗೋವಿಂದರೆಡ್ಡಿ

Date:

Advertisements

ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

“ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಕಂಡುಬಂದರೆ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು” ಎಂದು ಸೂಚಿಸಿದರು.

Advertisements

“ಸಂಬಂಧಪಟ್ಟ ಗ್ರಾಮಗಳಲ್ಲಿ ಖಾಸಗಿ ಬೋರವೆಲ್‌ಗಳನ್ನು ಬಾಡಿಗೆ ಪಡೆಯಬೇಕು. ಖಾಸಗಿಯಾಗಿ ಲಭ್ಯ ಇಲ್ಲದಿದ್ದರೆ ಕೂಡಲೇ ಟ್ಯಾಂಕರ್ ಮಾಲೀಕರಿಂದ ಕೊಟೆಶನ್ ಪಡೆದು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನೀರಿನ ಟ್ಯಾಂಕರ್ ಬಾಡಿಗೆ ಪಡೆದು ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು, ಟ್ಯಾಂಕರ್ ಮಾಲೀಕರಿಗೆ 15 ದಿನಕೊಮ್ಮೆ ಬಾಡಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಾಗಿ ಬಾಡಿಗೆ ಪಡೆದ ಖಾಸಗಿ ಬೋರವೆಲ್ ಮಾಲೀಕರಿಗೂ ಸಹ ಬಾಡಿಗೆ ಪಾವತಿಸುವ ಕ್ರಮಕೈಗೊಳ್ಳಬೇಕೆಂದು ಸಂಬಂಧಪಟ್ಟ ತಹಸೀಲ್ದಾರ್‌ಗಳಿಗೆ ಸೂಚಿಸಿದರು.

ಬಸವಕಲ್ಯಾಣ, ಭಾಲ್ಕಿ, ಕಮಲನಗರ ತಾಲೂಕುಗಳಲ್ಲಿ ಹಲವೆಡೆ ಮೋಟಾರ್ ಮತ್ತು ಪೈಪ್ ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಅದರ ಬಿಲ್‌ಗಳ ಪಾವತಿಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ‌, “ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಿಕೊಳ್ಳಲಾಗಿದ್ದು, ಕೆಲವೊಂದು ಗ್ರಾಮಗಳಲ್ಲಿ ಬೋರವೆಲ್ ಕೊರೆಸಿ ಪೈಪ್‌ಲೈನ್ ಅಳವಡಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮವಹಿಸಬೇಕು” ಎಂದರು.

“ಅದೇ ರೀತಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು” ಎಂದು ಜಿಲ್ಲಾ ಪಂಚಾಯತ್‌ ಸಿಇಓ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X