ಕಲಬುರಗಿ | ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರಕ್ಕೆ ಒತ್ತಾಯ

Date:

Advertisements

ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಡಿಸೆಂಬರ್ 28, ಗುರುವಾರದಂದು ಕಲಬುರಗಿಯ ಕನಕ ಭವನದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು ಎಂದು ಕುರುಬ ಸಮಾಜದ ಅಧ್ಯಕ್ಷ ಬಸವರಾಜ್ ಹೊಸಳ್ಳಿ ಮತ್ತು ಕಾರ್ಯದರ್ಶಿ ಮಲ್ಲಿಕಾರ್ಜುನ್ ಪೂಜಾರಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರು ಪೀಠ ತಿಂತಣಿ ಹಾಗೂ ಚಿತ್ತಾಪುರ ತಾಲೂಕ ಗೊಂಡ ಕುರುಬ ಸಂಘ ಮತ್ತು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಪಟ್ಟಣದಲ್ಲಿ ಡಿ.26ರಂದು ಕನಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2004ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರವು ಕುಲಶಾಸ್ತ್ರ ವರದಿಯನ್ನು ಮೂರು ಬಾರಿ ಪೂರಕ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದರು.

Advertisements

ಕಳೆದ ಬಿಜೆಪಿ ಸರ್ಕಾರದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಅರ್ಜುನ್ ಮುಂಡ, ಭಗವಂತ ಖುಬಾ, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಉಮೇಶ್ ಜಾದವ್, ಬಿ.ಎಲ್. ಸಂತೋಷ ಅವರನ್ನು  ಪೂಜ್ಯ ಶ್ರೀಸಿದ್ದರಾಮನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಹಾಗೂ ಚಿಂಚೋಳಿ ಮತ್ತು ಬಸವಕಲ್ಯಾಣ ವಿಧಾನಸಭೆ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,  ಬಿಜೆಪಿ ಮುಖಂಡರು ಕೇಂದ್ರ ಸರ್ಕಾರದಲ್ಲಿ ಕುರುಬರ ಎಸ್‌ಟಿ ಬೇಡಿಕೆ ಈಡೇರಿಸುವ ಭರವಸೆ ನೀಡಿ ಚುನಾವಣೆಯಲ್ಲಿ ಲಾಭ ಪಡೆದಿದ್ದಾರೆ ಎಂದು ಅವರು ದೂರಿದ್ದಾರೆ.

2024ರ ಚುನಾವಣೆ ಹತ್ತಿರ ಬಂದರೂ ಕುರುಬರ ಎಸ್.ಟಿ ಬೇಡಿಕೆ ಈಡೇರದ ಕಾರಣ ಕೇಂದ್ರ ಸರ್ಕಾರವು ಕುರುಬರಿಗೆ ನಂಬಿಕೆ ದ್ರೋಹ ಮಾಡಿದೆ. ಕುರುಬರ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯ ಬಂದಿದೆ. ಡಿಸೆಂಬರ್ 28ರಂದು ನಡೆಯುವ ಹೋರಾಟದಲ್ಲಿ ತಾಲೂಕಿನ ಕುರುಬ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ  ಮಾಜಿ ತಾಲೂಕಾಧ್ಯಕ್ಷ ಬಸವರಾಜ್ ಪೂಜಾರಿ ಮೊಗಲಾ, ಪ್ರಭು ಗಂಗಾಣಿ, ಯಲ್ಲಾಲಿಂಗ ಪೂಜಾರಿ, ಜಗನ್ನಾಥ್ ಪೂಜಾರಿ ಆಲೂರ್, ನಾಗೇಶ್, ಬೀರಲಿಂಗ ಪೂಜಾರಿ, ಭೋಜು ಶೇರಿ, ಸಂತೋಷ್ ಪೂಜಾರಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X