ಕಾಸರಗೋಡು | ಗೂಗಲ್ ಮ್ಯಾಪ್ ಅವಾಂತರ: ನದಿಯಲ್ಲಿ ತೇಲಿದ ಕಾರು; ಅದೃಷ್ಟವಶಾತ್ ಇಬ್ಬರು ಪಾರು

Date:

Advertisements

ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ ಪ್ರಯಾಣಿಕ ಇಬ್ಬರೂ ಕೂಡ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಕುಟ್ಟಿಕೋಲ್‌ನಿಂದ ಪಾಂಡಿಗೆ ಅರಣ್ಯದ ಮೂಲಕ ಹಾದು ಹೋಗುವ ರಸ್ತೆಯಲ್ಲಿ ಪಳಂಚಿ ಎಂಬಲ್ಲಿನ ಹಳೆ ಸೇತುವೆಯಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ತೇಲಿದ ಕಾರಿನಲ್ಲಿದ್ದವರು ಕಾಞಂಗಾಡ್ ಅಂಬಲತ್ತರ ಮೂಲದವರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

Advertisements

ಕಾರಿನಲ್ಲಿದ್ದ ಪುಲ್ಲೂರಿನ ಅಂಚಿಲತ್ ಹೌಸ್‌ನ ನಿವಾಸಿ ತಸ್ರೀಫ್ (36) ಹಾಗೂ ಮುನಂಬಮ್ ಹೌಸ್‌ನ ನಿವಾಸಿ ಅಬ್ದುಲ್ ರಶೀದ್ (35) ಎಂಬುವವರು ಉಪ್ಪಿನಂಗಡಿಗೆ ತಲುಪಲು ಗೂಗಲ್ ಮ್ಯಾಪ್ ಹಾಕಿಕೊಂಡು ಪ್ರಯಾಣಿಸುತ್ತಿದ್ದರು. ಆದರೆ, ಕಾರು ಕಾಡಿನೊಳಗಿನ ಒಳರಸ್ತೆಯಲ್ಲಿರುವ ಹಳೆಯ ಸೇತುವೆಯ ಮೇಲೆ ಅಪಘಾತವಾಗಿದೆ.

ಅವಘಡಗೊಂಡ ಪ್ರದೇಶದಲ್ಲಿ ಬುಧವಾರ ತಡರಾತ್ರಿ ವಿಪರೀತ ಮಳೆಯಾಗಿತ್ತು. ಪ್ರಯಾಣಿಕರು ತಡೆಗೋಡೆ ಇಲ್ಲದೇ ಇದ್ದ ಸೇತುವೆ ಮೇಲೆ ಬಂದಾಗ ನೀರು ಉಕ್ಕಿ ಹರಿಯುತ್ತಿರುವುದು ಇವರಿಗೆ ತಿಳಿಯಲಿಲ್ಲ. ಹೀಗಾಗಿ, ಕಾರು ಮುಂದೆ ಚಲಾಯಿಸಿದ್ದಾರೆ. ಈ ವೇಳೆ ಕಾರು ನದಿಗೆ ಬಿದ್ದು ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಜಿ ಎಸ್ ಸಂಗ್ರೇಶಿ

ಈ ನಡುವೆ ಕಾರಿನೊಳಗಿನಿಂದ ಪವಾಡಸದೃಶ ರೀತಿಯಲ್ಲಿ ಹೊರಬಂದ ತಸ್ರೀಫ್ ಮತ್ತು ಅಬ್ದುಲ್ ರಶೀದ್ ನದಿಯಲ್ಲಿದ್ದ ಮರವೊಂದನ್ನು ಆಸರೆಯಾಗಿ ಹಿಡಿದುಕೊಂಡು, ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿದ ನಂತರ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಹಾಗೂ ಆದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಇಬ್ಬರನ್ನೂ ಹಗ್ಗದ ನೆರವಿನಿಂದ ರಕ್ಷಣೆ ಮಾಡಿರುವುದಾಗಿ ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X