ಸರ್ಕಾರ, ಕೃಷಿ ವಿಜ್ಞಾನಿಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ; ರೈತ ಸಂಘ ಕಿಡಿ

Date:

Advertisements

ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಗೆ ರೋಗ ತಗುಲಿದ್ದು, ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಷ್ಟ ಅನುಭಿವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯಲ್ಲಿ ಬಹುತೇಕ ರೈತರು ಬೆಳೆದಿದ್ದು ಬಿ.ಟಿ ತಳಿಯ ಹತ್ತಿ ಬೆಳೆ ಕೆಂಪು-ಹಳದಿ ಬಣ್ಣಕ್ಕೆ ತಿರುಗಿ, ಒಣಗಿ ಹೋಗಿವೆ. ಬಹಳಷ್ಟು ರೈತರು ನಷ್ಟ ಅನುಭವಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರೋಗಕ್ಕೆ ತುತ್ತಾಗಿದ್ದ ಬೆಳೆಗೆ ಕೃಷಿ ವಿಶ್ವವಿದ್ಯಾಲಯದ ತಜ್ಞರು ಸೂಚಿಸಿದರ ಕ್ರಿಮಿನಾಶಕ ಸಿಂಪಡಿಸಲಾಗಿದೆ. ಆದರೂ ರೋಗ ಹತೋಟಿಗೆ ಬಂದಿಲ್ಲ. ಸಾವಿರಾರು ರೈತರು ಹತ್ತಿ ಬೆಳೆಯನ್ನು ಕಿತ್ತುಹಾಕಿ, ಪರ್ಯಾಯ ಬೆಳೆಯತ್ತ ಮುಖ ಮಾಡಿದ್ದಾರೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

Advertisements

“ಬಿ.ಟಿ ತಳಿಯ ಹತ್ತಿ ಬೆಳೆದು, ನಷ್ಟ ಅನುಭವಿಸಿದ ರೈತರಿಗೆ ನಷ್ಟ ಪರಿಹಾರ ನೀಡಬೇಕು. ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ರೈತರ ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು” ಎಂದು ಒತ್ಥಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಗೌರವಾಧ್ಯಕ್ಷ ಮಾಜೀದ್ ಸಾಬ್, ಉಪಾಧ್ಯಕ್ಷ ವೀರೇಶ್ ಗೌಡ, ಹುಲಿಗೆಪ್ಪ ಜಾಲಬೆಂಚಿ, ನರಸರೆಡ್ಡಿ, ಮಲ್ಲಿಕಾರ್ಜುನ ರಮೇಶ ಶ್ರೀಧರ ತಿಮ್ಮಪ್ಪ ಸೇರಿದಂತೆ ರೈತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X