ಯಾದಗಿರಿ | ಸರ್ಕಾರದ ಗೈರಾಣ ಜಮೀನು ಒತ್ತುವರಿ; ಅಧಿಕಾರಿಗಳ ವಿರುದ್ಧ ಉಮೇಶ ಕೆ. ಮುದ್ನಾಳ ಕಿಡಿ

Date:

Advertisements

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿನ ಸರ್ವೇ ನಂ.39ರಲ್ಲಿ 10.37 ಎಕರೆ, ಸರ್ವೇ ನಂ.34ರಲ್ಲಿ 14.32 ಎಕರೆ ಗೈರಾಣ ಜಮೀನು ಮತ್ತು ಸರ್ವೇ ನಂ.43ರಲ್ಲಿ 23.9 ಎಕರೆ ಅರಣ್ಯ ಇಲಾಖೆಯ ಜಮೀನು ಸೇರಿ ಒಟ್ಟು 48 ಎಕರೆ ಭೂಮಿ ಇದೆ. ಇದರ ಪೈಕಿ ಬಹುತೇಕ ಜಮೀನು ಒತ್ತುವರಿಯಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ.

“ಈ ಜಮೀನಿನ ಮೇಲೆ ಕೆಲವರು ಕಣ್ಣು ಹಾಕಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ಆದರೆ, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೂ, ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಒತ್ತುವರಿಯನ್ನು ತೆರುವಗೊಳಿಸುವಂತೆ ಸುಮಾರು ವರ್ಷಗಳಿಂದ ರೈತರು, ಕುರಿಗಾಹಿಗಳು, ದನಕಾಯಿವವರು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದರೂ, ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ವಡಗೇರಾ ತಹಸೀಲ್ದಾರರು, ಜಿಲ್ಲಾಧಿಕಾರಿಗಳು, ಸರ್ವೇ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ತೆರಳಿ ಪರಿಶೀಲನೆ ನಡೆಸಬೇಕು. ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

“ಸರ್ಕಾರಿ ಜಾಗಾದಲ್ಲಿ ಪಶುಗಳಿಗೆ ದನಕರುಗಳಿಗೆ, ಕುರಿಗಳಿಗೆ, ಮೇಯಲು ಗಡಿ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಆಂಜಿನೇಯ ನಾಯ್ಕೋಡಿ ಬೆಳಗೇರಿ. ನಿಂಗಪ್ಪ, ದೇವಪ್ಪ, ಹೊನ್ನಪ್ಪ, ಭೀಮಣ್ಣ, ನಿಂಗ ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X