ಕಲಬುರಗಿ | ಕಬ್ಬಿಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ : ಡಿಸಿ ಬಿ.ಫೌಜಿಯಾ ತರನ್ನುಮ್

Date:

Advertisements

ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆಯ ದರ (ಎಫ್.ಆರ್.ಪಿ) ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಪ್ರಸಕ್ತ 2024-25ನೇ ಸಾಲಿನಲ್ಲಿ 01.07.2024 ರಿಂದ 30.06.2025ರ ವರೆಗೆ ಅಳಂದ ತಾಲೂಕಿನ ಭೂಸನೂರ ಎನ್.ಎಸ್.ಎಲ್. ಶುಗರ್ಸ್ ಕಾರ್ಖಾನೆ 9,34,763 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 91,956 ಸಕ್ಕರೆ ಉತ್ಪಾದಿಸಲಿದೆ. ಶೇ.9.84 ಸಕ್ಕರೆ ಇಳುವರಿ ಬರಲಿದ್ದು, ಪ್ರತಿ ಮೆ.ಟನ್ ಕಬ್ಬಿಗೆ 3,264 ರೂ.ದರ ನಿಗದಿ ಮಾಡಲಾಗಿದೆ.

ಅಫಜಲಪುರ ತಾಲೂಕಿನ ಚೌಡಾಪುರ ಕೆ.ಪಿ.ಆರ್. ಶುಗರ್ಸ್ ಕಾರ್ಖಾನೆ 11,35,389 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 91,170 ಸಕ್ಕರೆ ಉತ್ಪಾದಿಸಲಿದೆ. ಶೇ.10.12 ಸಕ್ಕರೆ ಇಳುವರಿಯೊಂದಿಗೆ ಪ್ರತಿ ಮೆ.ಟನ್ ಕಬ್ಬಿಗೆ 3,357 ರೂ. ದರ ನಿಗದಿ ಮಾಡಲಾಗಿದೆ.

Advertisements

ಅಫಜಲಪುರ ತಾಲೂಕಿನ ಹವಳಗಾದ ರೇಣುಕಾ ಶುಗರ್ಸ್ ಕಾರ್ಖಾನೆ 8,92,152 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 56,828 ಸಕ್ಕರೆ ಉತ್ಪಾದಿಸಲಿದೆ. ಶೇ.9.15 ಸಕ್ಕರೆ ಇಳುವರಿ ಹೊಂದಿದ್ದು, ಪ್ರತಿ ಮೆ.ಟನ್ ಕಬ್ಬಿಗೆ 3,151 ರೂ.ದರ ನಿಗದಿಪಡಿಸಲಾಗಿದೆ.

ಯಡ್ರಾಮಿ ತಾಲೂಕಿನ ನಾಗರಹಳ್ಳಿಯ ಉಗಾರ ಶುಗರ್ಸ್ ಕಾರ್ಖಾನೆ 3,79,352 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 34,890 ಸಕ್ಕರೆ ಉತ್ಪಾದಿಸಲಿದೆ. ಶೇ.9 ಸಕ್ಕರೆ ಇಳುವರಿಯೊಂದಿಗೆ ಪ್ರತಿ ಮೆ.ಟನ್ ಕಬ್ಬಿಗೆ 3,151 ರೂ. ದರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ಸಾಹಿತ್ಯದ ಹಿರಿಮೆ ಹೆಚ್ಚಿಸಿದ ಶರಣರು : ಗುರುಬಸವ ಪಟ್ಟದ್ದೇವರು

ರೈತರು ಆಯಾ ಸಮೀಪದ ಸಕ್ಕರೆ ಕಾರ್ಖಾನೆಗೆ ಕಬ್ಬು ಮಾರಾಟ ಮಾಡುವ ಮೂಲಕ ಸೌಲಭ್ಯ ಪಡೆಯಬೇಕು ಎಂದು ಡಿ.ಸಿ.ಫೌಜಿಯಾ ತರನ್ನುಮ್ ಅವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X