ಮಂಡ್ಯ| ಸರಕಾರ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ : ಬಿ.ಎಂ.ಅಪ್ಪಾಜಪ್ಪ ಮನವಿ

Date:

Advertisements

ಪ್ರಸ್ತುತ ಜಾನಪದಕ್ಕೆ ಪ್ರೋತ್ಸಾಹ ಇಲ್ಲವಾಗುತ್ತಿದ್ದು, ಸರ್ಕಾರ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ ಮನವಿ ಮಾಡಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ಶ್ರೀ ಮಲೆಮಹದೇಶ್ವರ ಜಾನಪದ, ಸುಗಮ ಸಂಗೀತ ಅಕಾಡೆಮಿ ತಂಡ(ಹೆಮ್ಮಿಗೆ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜಾನಪದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆ ಜನಪದ ಸಂಗೀತದ ತವರಾಗಿದ್ದು, ಜಾನಪದ ಜೀವನ ಶೈಲಿಯನ್ನು ಕಲಿಸುತ್ತದೆ. ಜಾನಪದ ತಮ್ಮ ಕಷ್ಟ ಸುಖಗಳನ್ನು ಹಂಚಿಕೊಳ್ಳುವ ಕಲೆಯಾಗಿದೆ ಎಂದು ಬಣ್ಣಿಸಿದರು.

Advertisements

ಬಸವೇಶ್ವರ ಆಗ್ರೋ ರೈಸ್‌ ಇಂಡಸ್ಟ್ರೀಸ್‌ ಮಾಲೀಕ ಎಸ್‌.ಸಿ.ಬಸವರಾಜು ಸಂಪಹಳ್ಳಿ ಮಾತನಾಡಿ, ಕೆಲ ಧಾರಾವಾಹಿಗಳು ಮನೆ ಮತ್ತು ಕುಟುಂಬದಲ್ಲಿನ ಜಗಳವನ್ನೇ ತೋರಿಸುತ್ತಿವೆ. ಇದರಿಂದ ಮನೆಗಳಲ್ಲಿ ಶಾಂತಿ ನೆಮ್ಮದಿ ಹಾಳು ಮಾಡುವ ಲಕ್ಷಣಗಳನ್ನೇ ಇದರಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಹೇಳಿದರು.

ಭತ್ತದ ಪೈರು ನಾಟಿ ಮಾಡುವಾಗ, ರಾಗಿ ಬೀಸುವಾಗ, ಸೋಬಾನೆ ಪದಗಳನ್ನು ಜಾನಪದ ಶೈಲಿಯಲ್ಲಿ ಹಾಡುವ ಮೂಲಕ ಬಾಯಿಂದ ಬಾಯಿಗೆ ಬಂದು ಗ್ರಾಮೀಣ ಭಾಗಗಳಲ್ಲಿ ಜಾನಪದ ಹುಟ್ಟಿಕೊಂಡಿತು. ಇದರಲ್ಲಿ ಅನಕ್ಷರಸ್ಥರು ಹೆಚ್ಚಾಗಿ ಜನಪದ ಹಾಡುಗಳನ್ನು ಹಾಡುವುದು ಸಾಮಾನ್ಯವಾಗಿದೆ ಎಂದರು.

ಮಂಡ್ಯ ೨

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುರೇಶ್‌ ಮಾತನಾಡಿ, ಜಾನಪದ ಹಾಡುಗಳು ನಶಿಸುತ್ತಿವೆ. ಅವುಗಳನ್ನು ಶಾಲಾ ಮತ್ತು ಕಾಲೇಜು ಹಂತದಲ್ಲಿ ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕು. ಇದು ನಮ್ಮ ನಾಡಿನ ಸಂಸ್ಕೃತಿಯು ಹೌದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಜೀತಕ್ಕಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿದ ಜಿಲ್ಲಾಡಳಿತ

ಸಂಗೀತೋತ್ಸವದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳು ಜಾನಪದ ಹಾಡು ಹಾಡಿ ರಂಜಿಸಿದರು.

ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಒಕ್ಕೂಟದ ಮೈಸೂರು ವಿಭಾಗ ಅಧ್ಯಕ್ಷ ಆರ್‌.ಕೆ.ಸ್ವಾಮಿ, ಶ್ರೀ ಮಲೆಮಹದೇಶ್ವರ ಜಾನಪದ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಎಚ್‌.ಎಂ.ಮಹದೇವು, ಸೂನಗಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಶಿವಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X