ಬೀದರ್‌ | ಮನರೇಗಾ ಮಾನವ ದಿನ 200ಕ್ಕೆ ಹೆಚ್ಚಿಸಲು ಗ್ರಾಕೂಸ್‌ ಆಗ್ರಹ

Date:

Advertisements

ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್) ಜಿಲ್ಲಾ ಘಟಕದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬೀದರ್‌ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ʼಮನರೇಗಾ ಯೋಜನೆಡಿಯಲ್ಲಿ ಗ್ರಾಮೀಣ ಭಾಗದ ಕಾರ್ಮಿಕರಿಗೆ 100 ದಿನಗಳ ಕೆಲಸದ ಗ್ಯಾರಂಟಿಯನ್ನು ನೀಡಿದೆ. ಇದರಿಂದ ಗ್ರಾಮೀಣ ಭಾಗದ ಕೊಟ್ಯಾಂತರ ಕಾರ್ಮಿಕರಿಗೆ ಬದುಕಿಗೆ ಆಧಾರವಾಗಿದೆ ಹಾಗೂ ನಗರಗಳಿಗೆ ವಲಸೆ ಹೋಗುವುದು ತಪ್ಪಿದೆ. ಆದರೆ ಇತ್ತಿಚಿನ ದಿನಗಳಲ್ಲಿ ಸರ್ಕಾರದ ಹೊಸ ನೀತಿಗಳ ಬದಲಾವಣೆಯಿಂದಾಗಿ ಕಾರ್ಮಿಕರಿಗೆ 100 ದಿನಗಳ ಖಾತ್ರಿ ಕೆಲಸ ಸರಿಯಾಗಿ ಸಿಗುತ್ತಿಲ್ಲʼ ಎಂದು ದೂರಿದರು.

Advertisements

ʼಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್‌ನಲ್ಲಿ ಮೀಸಲಿಡಬೇಕಾದ ಹಣ ಕೇಂದ್ರ ಸರಕಾರ ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ. ಕಾರ್ಮಿಕರಿಗೆ ನೂರು ದಿನಗಳ ಉದ್ಯೋಗ ಖಾತ್ರಿ ಕೆಲಸದ ಹಕ್ಕು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಕೆಲಸ ಮಾಡಿದ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಕೂಲಿ ಪಾವತಿಯಾಗದ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ 2 ಲಕ್ಷ ಕೋಟಿ ಹಣ ಮೀಸಲಿಡಬೇಕು. ಈ ವರ್ಷ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸಿದ ಕಾರ್ಮಿಕರ ಬಾಕಿ ಕೂಲಿ ಹಣ ಕೂಡಲೇ ಬಿಡುಗಡೆಗೊಳಿಸಬೇಕುʼ ಎಂದು ಒತ್ತಾಯಿಸಿದರು.

    ʼಒಂದು ಕುಟುಂಬಕ್ಕೆ 100 ದಿನಗಳ ಬದಲು 200 ದಿನಗಳ ಕೆಲಸ ಖಾತ್ರಿಗೊಳಿಸಬೇಕು. ಕಾರ್ಮಿಕರಿಗೆ ಒಂದು ದಿನಕ್ಕೆ ಕನಿಷ್ಠ ವೇತನ 600 ನಿಗದಿಗೊಳಿಸಬೇಕು. ಕೆಲಸದ ವೇಳೆ ಮರಣ ಹೊಂದಿದ ಕಾರ್ಮಿಕರಿಗೆ ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು.

      ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಲ್ಲಾ ರಾಜ್ಯಗಳ ಕಾರ್ಮಿಕರು ಡಿಸೆಂಬರ್ 5 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲಿಸಿ ಹಾಗೂ ನಮ್ಮ ಬೇಡಿಕೆ ಈಡೇರಿಸಬೇಕೆಂದು ಈ ಮೂಲಕ ಒತ್ತಾಯಿಸಲಾಗುತ್ತಿದೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

      ಈ ಸುದ್ದಿ ಓದಿದ್ದೀರಾ? ಒಂದು ಕುಟುಂಬಕ್ಕೆ 100 ದಿನಗಳ ಬದಲಾಗಿ 200 ದಿನಗಳ ಕೆಲಸ ಖಾತ್ರಿಗೊಳಿಸಬೇಕು. ಕಾರ್ಮಿಕರಿಗೆ ಒಂದು ದಿನಕ್ಕೆ ಕನಿಷ್ಠ ವೇತನ 600 ನೀಡಬೇಕು.

      ಈ ಸಂದರ್ಭದಲ್ಲಿ ಗ್ರಾಕೂಸ್ ಸಂಘಟನೆಯ ಪ್ರಮುಖರಾದ ಸಪ್ನಾದೀಪ, ಗೀತಾ ಡಿಗಾರೆ, ರೇಷ್ಮಾ, ಸುಶೀಲಾ, ರೇಖಾ, ಅನ್ನಪೂರ್ಣ, ರಾಜಕುಮಾರ್ ಡಿಗಾರೆ, ಫಿಲೋಮನ್, ಸುಶೀಲಾ, ಕಲಾವತಿ ಸೇರಿದಂತೆ ಇತರರಿದ್ದರು.

      eedina
      ಈ ದಿನ ಡೆಸ್ಕ್‌
      Website |  + posts

      ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

      ಪೋಸ್ಟ್ ಹಂಚಿಕೊಳ್ಳಿ:

      LEAVE A REPLY

      Please enter your comment!
      Please enter your name here

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

      ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

      ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

      ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

      ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

      ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

      ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

      ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

      Download Eedina App Android / iOS

      X