ವಿಜಯನಗರ | ವಸತಿ ರಹಿತರಿಗೆ ನಿವೇಶನ ಮಂಜೂರಾತಿಗೆ ಗ್ರಾಕೂಸ ಒತ್ತಾಯ

Date:

Advertisements
  • ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕು
  • ನಿವೇಶನ ಹಂಚಿಕೆಯಾಗದ ಕಾರಣ ವಸತಿ ರಹಿತ ಕುಟುಂಬಗಳು ಬೀದಿಯಲ್ಲಿ ಬದುಕುವಂತಾಗಿದೆ

ಶ್ರಮಿಕ ವರ್ಗದ ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕೆಂದು ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಹರಪನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಗ್ರಾಕೂಸ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಸುಮಾರು ವರ್ಷಗಳಿಂದ ಬಡ ಕೂಲಿಕಾರರ ವಸತಿಗಾಗಿ ಸರ್ಕಾರ ಭೂಮಿಯನ್ನು ಕಾಯ್ದಿರಿಸಿದ್ದು, ಆದರೆ ತಾ.ಪಂ. ಹಾಗೂ ಗ್ರಾ.ಪಂ. ಅಧಿಕಾರಿಗಳ ನಿರ್ಲಕ್ಷತನದಿಂದ ನಿವೇಶನ ಹಂಚಿಕೆ ಮಾಡದ ಕಾರಣ ವಸತಿ ರಹಿತ ಕುಟುಂಬಗಳಿಗೆ ಬೀದಿಯಲ್ಲಿ ಬದುಕುವಂತಾಗಿದೆ. ಸರಕಾರ ಮಂಜೂರಾತಿ ನೀಡಿದರೂ ತಾಲೂಕು ಆಡಳಿತ ನಿರ್ಲಕ್ಷ್ಯ ತೋರುತ್ತಿದೆ. ಕನಿಷ್ಠ ನಿವೇಶನ ನೀಡಿದರೆ ಗುಡಿಸಲನ್ನಾದರೂ ಕಟ್ಟಿಕೊಂಡು ಜೀವನ ಸಾಗಿಸಬಹುದಿತ್ತು. ಆದರೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಂಚಿಕೆ ಮಾಡದಿರುವುದು ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಎಂಬುದು ಎದ್ದು ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

“ದಿನಗೂಲಿ ಮಾಡುವ ಹಲವು ಕುಟುಂಬಳಿಗೆ ನಿವೇಶನ ಇಲ್ಲದೆ ಪರದಾಡುವಂತಾಗಿದೆ. ನಿವೇಶನ ರಹಿತ ಕೆಲವು ಕುಟುಂಬಗಳು ಸೂರು ಇಲ್ಲದೆ ಅವಿಭಕ್ತ ಕುಟುಂಬಗಳಲ್ಲಿ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಇದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ನಿವೇಶನ ರಹಿತ ಕುಟುಂಬಗಳಿಗೆ ಸರಕಾರಿ ಜಮೀನು ಗುರುತಿಸಿ, ನಿವೇಶನ ಹಂಚಿಕೆ ಮಾಡಬೇಕೆಂದು” ಒತ್ತಾಯಿಸಿದ್ದರು.

“ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿ, ಕಂಚಿಕೆರೆ, ಹಳ್ಳಿಕೇರಿ, ಸಾಸ್ವಿಹಳ್ಳಿ ಜಿ.ಪಿ., ಕುಣೇ ಮಾದಿಹಳ್ಳಿ, ಮೈದೂರು, ಗೌರಿಪುರ, ತೊಗರಿಕಟ್ಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಾಸಿಸುವ ನಿವೇಶನ ವಂಚಿತರಿಗೆ ಜಾಗ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕ | ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ಭರ್ತಿಗೆ ಸೂಚನೆ: ಶರಣಪ್ರಕಾಶ್‌ ಪಾಟೀಲ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಕೋಗಳಿಮಲ್ಲೇಶ್ , ಜಿಲ್ಲಾ ಕಾರ್ಯಕರ್ತೆ ಭಾಗ್ಯ , ತಾಲೂಕು ಕಾರ್ಯಕರ್ತರಾದ ಶ್ರುತಿ , ನೀಲಮ್ಮ , ಯಶೋಧ , ಪಾರ್ವತಿ , ಸುಮಾ, ಹಾಲಮ್ಮ, ರೇಣುಕಾ, ಕವಿತಾ ,ಹನುಮಕ್ಕ ,ಸೋಬಮ್ಮ, ಗೀತಾ, ರತ್ನಮ್ಮ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X