ರಾಯಚೂರು | ಒಂದೇ ರಸ್ತೆ ಅಭಿವೃದ್ಧಿಗೆ ಮೂರು ಬಾರಿ ಅನುದಾನ; ಸಾರ್ವಜನಿಕರ ಆರೋಪ

Date:

ದೇವದುರ್ಗ ತಾಲೂಕಿನ ಎನ್ ಗಣೇಕಲ್ ಗ್ರಾಮದಿಂದ ನೀಲಗಲ್ ಗ್ರಾಮದವರೆಗೆ ಕೈಗೊಂಡಿರುವ ಒಂದೇ ರಸ್ತೆ ಕಾಮಗಾರಿಗೆ ಎರಡು ಬಾರಿ ಭೂಮಿಪೂಜೆ ನೆರೆವೇರಿಸಿ ಕಾಮಗಾರಿ ಪ್ರಾರಂಭಿಸಿದ್ದೇವೆಂದು ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದರು.

- Advertisement -

“2017-18ನೇ ಸಾಲಿನಲ್ಲಿ ರಸ್ತೆ ಕಾಮಗಾರಿಗೆ ಒಟ್ಟು ₹70 ಲಕ್ಷ ಬಿಡುಗಡೆಯಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸದೆ ಕಳಪೆ ನಡೆಸಿ ಅರ್ಧಕ್ಕೆ ಬಿಟ್ಟಿದ್ದರು. ಬಳಿಕ ಅದೇ ರಸ್ತೆ ಕಾಮಗಾರಿಗೆ ಎರಡನೇ ಬಾರಿಗೆ ₹3.10 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿದೆ. ಹೀಗೆ ಒಂದೇ ರಸ್ತೆಗೆ ಎರಡು ಬಾರಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆಯಾದರೂ ಗುಣಮಟ್ಟದ ರಸ್ತೆ ನಿರ್ಮಿಸದೇ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಕೈಗೊಂಡು ಹಣ ಲೂಟಿ ಹೊಡೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಇದೀಗ 2024-25ನೇ ಸಾಲಿನಲ್ಲಿ ಮತ್ತೆ ಎನ್ ಗಣೇಕಲ್‌ನಿಂದ ನೀಲಗಲ್ ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ₹1 ಕೋಟಿ ಮಂಜೂರಾಗಿದೆ. ಒಂದೇ ರಸ್ತೆ ಕಾಮಗಾರಿಗೆ ಮೂರು ಬಾರಿ ಹಣ ಮಂಜೂರು ಮಾಡುತ್ತಿರುವುದು ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿ ರಸ್ತೆ ಹೆಸರಿನಲ್ಲಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಗ್ರಾಮಸ್ಥರು ಹಿಡಿಶಾಪ ಹಾಕಿದರು.

ಸ್ಥಳೀಯ ನಿವಾಸಿ ಶಾಂತಕುಮಾರ್ ಈದಿನ.ಕಾಮ್ ಜೊತೆ ಮಾತನಾಡಿ‌, “ರಸ್ತೆ ಕಾಮಗಾರಿಗೆ ಒಮ್ಮೆ ಮಂಜೂರಾದ ಹಣ ದುರ್ಬಳಕೆ ಮಾಡಿಕೊಂಡು ಗುಣಮಟ್ಟದ ರಸ್ತೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅದೇ ರಸ್ತೆ ಅಭಿವೃದ್ಧಿಗೆ ಮತ್ತೆ ಹಣ ಮಂಜೂರು ಮಾಡಿರುವುದನ್ನು ರದ್ದುಪಡಿಸಬೇಕು. ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

“ಗಣೇಕಲ್‌-ನೀಲಗಲ್ ಮಧ್ಯದ ರಸ್ತೆ ಅಭಿವೃದ್ಧಿಗೆ ಮಂಜೂರಾದ ₹1 ಕೋಟಿಯ ಕಾಮಗಾರಿ ಟೆಂಡರ್ ಈಗಾಗಲೇ ಮುಗಿದಿದೆ. ಇದನ್ನು ರದ್ದುಪಡಿಸಬೇಕು. ಇದೇ ಅನುದಾನವನ್ನು ಎನ್ ಗಣೇಕಲ್ ಗ್ರಾಮದ ಮಲದಕಲ್ ಗ್ರಾಮದ ಸಿಸಿ ರಸ್ತೆ ಮತ್ತು ಒಳಚರಂಡಿ ನಿರ್ಮಿಸಲು ಬಳಕೆ ಮಾಡಬೇಕು. ಈ ಹಿಂದೆ ರಸ್ತೆ ಹೆಸರಿನಲ್ಲಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಅನುಮತಿ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...