ಕಲಬುರಗಿ | ಬಗರ್‌ ಹುಕುಂ ಜಮೀನಿನಲ್ಲಿ ಸ್ಮಶಾನ; ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ನೆತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ʼಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿರುವ ರೈತರು ಇದೇ ಭೂಮಿ ನಂಬಿ ಜೀವನ ಸಾಗಿಸುತ್ತಿದ್ದೇವೆ.
ಆದರೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಮೀನನಲ್ಲಿ 4 ಎಕರೆ ಸ್ಮಶಾನಕ್ಕಾಗಿ ಗೊತ್ತು ಮಾಡಿದ್ದಾರೆ. ಇದರಿಂದ ನಮಗೆ ಆತಂಕ ಎದುರಾಗಿದೆʼ ಎಂದರು.

Advertisements

ʼಜಮೀನಿನಲ್ಲಿ ಸಾಗುವಳಿ ನಡೆಯುತ್ತಿರುವುದರಿಂದ ಕೃಷಿ ಯೋಗ್ಯ ಭೂಮಿಯನ್ನು ಹೊರತುಪಡಿಸಿ ಅನುಪಯುಕ್ತ ಭೂಮಿಯಲ್ಲಿ ಸ್ಮಶಾನಕ್ಕೆ ಜಮೀನು ಗುರುತಿಸಿ, ಸದರಿ ಭೂಮಿ ರೈತರಿಗೆ ಸಾಗುವಳಿಗೆ ಅವಕಾಶ ನೀಡಬೇಕುʼ ಎಂದು ಪ್ರತಿಭಟನಾಕಾರರು ಅಗ್ರಹಿಸಿದರು.

ʼಬಗರ್ ಹುಕುಂ ಭೂಮಿಗಾಗಿ ಗ್ರಾಮಸ್ಥರು ಸಲ್ಲಿಸಿರುವ ಫಾರ್ಮ್ ನಂ.57 ಅರ್ಜಿಯನ್ನು ಕೂಡಲೇ ಪರಿಶೀಲಿಸಿ, ಸೂಕ್ತ ಸಮೀಕ್ಷೆ ನಡೆಸಿ 70 ವರ್ಷಗಳಿಂದಲೂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಜನಾಂದೋಲನ ಸಭೆ | ನನ್ನ ನಾಯಕತ್ವಕ್ಕೆ 135 ಸೀಟು, ಎಚ್‌ಡಿಕೆ ನಾಯಕತ್ವಕ್ಕೆ 19 ಸೀಟು: ಡಿಕೆಶಿ ತಿರುಗೇಟು

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ, ತಾಲೂಕು ಅಧ್ಯಕ್ಷ ವಿಶ್ವನಾಥ್ ಸಿಂಘೇ, ಸದಸ್ಯರಾದ ಭೀಮಾಶಂಕರ ಆಂದೋಲಾ, ಅಮೃತ್ ಚವ್ಹಾಣ, ಗುಂಡು ಬಾಬು ಚವ್ವಾಣ, ಶಿವರಾಂ ರಾಠೋಡ, ರಾಜು ರಾಠೋಡ, ಶಾಂತಾಬಾಯಿ ರಾಠೋಡ, , ಪಾಂಡು ರಾಠೋಡ, , ರವಿ ರಾಠೋಡ, , ಸಂತೋಷ್ ರಾಠೋಡ, , ಶಿವಕುಮಾರ್ ರಾಠೋಡ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X