ಬೀದರ್‌ | ಕಮಲನಗರದಲ್ಲಿ ʼಯಶವಂತಪೂರ-ಲಾತೂರ್‌ʼ ರೈಲು ನಿಲುಗಡೆ: ಸಚಿವ ಭಗವಂತ ಖೂಬಾ

Date:

Advertisements

ಬೀದರ್ ಜಿಲ್ಲೆಯ ಕಮಲನಗರದಲ್ಲಿ ಯಶವಂತಪೂರ-ಲಾತೂರ ರೈಲುಗಳ ನಿಲುಗಡೆಗೆ ರೈಲ್ವೇ ಇಲಾಖೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಕಮಲನಗರ ತಾಲೂಕಿನ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ರೈಲು ನಿಲುಗಡೆಯನ್ನು ಮುಂದಿನ ವಾರದೊಳಗೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಮಾಹಿತಿ ನೀಡಿದ್ದಾರೆ.

“ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಹಾಗೂ ಕರ್ನಾಟಕದ ಗಡಿ ತಾಲೂಕುವಾದ ಕಮಲನಗರ ರೈಲ್ವೆ ನಿಲ್ದಾಣದಲ್ಲಿ ವೇಗದೂತ ರೈಲುಗಳ ನಿಲುಗಡೆಯಾಗಬೇಕೆಂಬುದು ಜನತೆಯ ಬಹುದಿನದ ಕನಸಾಗಿತ್ತು. ಈ ನಿಟ್ಟಿನಲ್ಲಿ ನಾನು ಸತತವಾಗಿ ಪ್ರಯತ್ನಿಸಿದ್ದೆ, ಇದರ ಫಲವಾಗಿ
ಕಳೆದ ಕೆಲ ದಿನಗಳ ಹಿಂದೆ ಬೀದರ ಮೂಲಕ ಶಿರಡಿ ಹೊಗುವ ರೈಲುಗಳ ನಿಲುಗಡೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೆ, ಅದರಂತೆ ಯಶವಂತಪೂರ-ಲಾತೂರ (16583/84) ರೈಲು ಸಹ ಕಮಲನಗರದಲ್ಲಿ ನಿಲುಗಡೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವೆ” ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ.

“ಬೀದರನಿಂದ ಹಾದುಹೊಗುವ ಎಲ್ಲಾ ರೈಲುಗಳು ಭಾಲ್ಕಿಯಲ್ಲಿ ನಿಲುಗಡೆಗೊಂಡು ಮುಂದೆ ಉದಗೀರ ನಿಲಗಡೆಗೊಳ್ಳುತ್ತಿದ್ದವು, ಇವುಗಳ ಮಧ್ಯದಲ್ಲಿ ಬರುವ ಕಮಲನಗರದಲ್ಲಿ ರೈಲು ನಿಲುಗಡೆ ಮಾಡಲು ರೈಲ್ವೆ ಇಲಾಖೆಯ ನಿಯಮಗಳು ಇಷ್ಟು ದಿನ ಈ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದವು, ಆದರೆ ನಾನು ರೈಲ್ವೆ ಇಲಾಖೆಯ
ನಿರ್ದೇಶನದಂತೆ, ನಿಲಗಡೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಒದಿಗಿಸಿಕೊಟ್ಟು, ರೈಲ್ವೆ ಸಚಿವರಿಗೆ ಈ ನಿಲುಗಡೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿರುವ ಕಾರಣ ಇಂದು ಈ ರೈಲ್ವೆ ಬೋರ್ಡ ಕಮಲನಗರದಲ್ಲಿ ನಿಲುಗಡೆಗೆ ಒಪ್ಪಿಗೆ ಸೂಚಿಸಿದೆ” ಎಂದಿದ್ದಾರೆ.

Advertisements

ಈ ನಿಲುಗಡೆಯಿಂದ ಕಮಲನಗರ, ಔರಾದ, ಭಾಲ್ಕಿ ತಾಲೂಕಿನ ಗ್ರಾಮಗಳ ಜನರಿಗೆ ತುಂಬಾ ಅನುಕೂಲವಾಗಲಿದೆ, ಹಾಗೂ ರಾಜ್ಯದ ರಾಜಧಾನಿಯಾಗಿರುವ ಬೆಂಗಳೂರಿಗೆ ವಿದ್ಯಾಭ್ಯಾಸ, ಆಸ್ಪತ್ರೆ, ಇತರೆ
ಕೆಲಸಗಳಿಗೆ ತೆರಳಲು ಇನ್ನಷ್ಟು ಅನುಕೂಲವಾಗಲಿದೆ. ಜನತೆ ಈ ವಿಶೇಷ ರೈಲಿನ ಸದೂಪಯೋಗ
ಪಡೆದುಕೊಳ್ಳಲು ಸಚಿವರು ವಿನಂತಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼನಿಗರಾಣಿʼ ವಿನೂತನ ಯೋಜನೆ ಜಾರಿ: ಎಸ್‌ಪಿ ಚನ್ನಬಸವಣ್ಣ

ಜನತೆಯ ಇಚ್ಛೆಯಂತೆ ಹಾಗೂ ನನ್ನ ಮನವಿಗೆ ಸ್ಪಂದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವರವರಿಗೆ ಮತ್ತು ರೈಲ್ವೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಕೇಂದ್ರ ಸಚಿವ ಭಗವಂತ ಖೂಬಾ ಧನ್ಯವಾದ ತಿಳಿಸಿದ್ದಾರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X