ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಅಲಿ ಆಕ್ರೋಶ

Date:

Advertisements

“ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ, ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಾಗಾಗಿ, ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆಕ್ರೋಶ ಹೊರಹಾಕಿದ್ದಾರೆ.

ಬಂಟ್ವಾಳದ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಕೊಲೆ ಘಟನೆ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರವು ವಿಶೇಷ ಗಮನಹರಿಸಲಿ: ಜಮಾಅತೆ ಇಸ್ಲಾಮೀ ಹಿಂದ್ ಆಗ್ರಹ

Advertisements

“ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕಿದೆ. ಈ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X