ಗುಬ್ಬಿ | ದುರ್ಗಾ ಪರಮೇಶ್ವರಿ ದೇವಸ್ಥಾನ ನಿರ್ಮಾಣಕ್ಕೆ ಮುಸ್ಲಿಂ ಸಮಾಜದಿಂದ 50 ಸಾವಿರ ದೇಣಿಗೆ..!!

Date:

Advertisements

ಗುಬ್ಬಿ ಪಟ್ಟಣದ ಬಾಬು ಜಗಜೀವನರಾಂ ನಗರ ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಮುಸ್ಲಿಂ ಸಮಾಜ 50 ಸಾವಿರ ರೂ ದೇಣಿಗೆ ನೀಡಿ ಪರಸ್ಪರ ಸೌಹಾರ್ದತೆ ಹಾಗೂ ಧಾರ್ಮಿಕ ವಿಚಾರದಲ್ಲಿ ಜಾತ್ಯತೀತ ಮನೋಭಾವ ತೋರಿದ್ದಾರೆ.

ಪಟ್ಟಣದಲ್ಲಿ ಮುಸ್ಲಿಂ ಸಮಾಜ ಪರವಾಗಿ ಚೆಕ್ ವಿತರಣೆ ಮಾಡಿದ ಪಪಂ ಸದಸ್ಯ ಮಹಮ್ಮದ್ ಸಾದಿಕ್ ಮಾತನಾಡಿ ಗುಬ್ಬಿ ತಾಲ್ಲೂಕಿನಲ್ಲಿ ಎಂದೆಂದೂ ಕೋಮು ಸೌಹಾರ್ದ ವಾತಾವರಣ ಸೃಷ್ಟಿಯಾಗಿದೆ. ಧರ್ಮ ಬೇಧವಿಲ್ಲದೆ ಎಲ್ಲಾ ಹಬ್ಬಗಳನ್ನು ಆಚರಿಸುವ ನಮ್ಮಲ್ಲಿ ಮತ್ತಷ್ಟು ಬಾಂಧವ್ಯ ಗಟ್ಟಿಯಾಗಲು ಮುಸ್ಲಿಂ ಸಮಾಜದಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮಿತಿಗೆ 50 ಸಾವಿರ ನಗದು ದೇಣಿಗೆಯನ್ನು ಚೆಕ್ ಮೂಲಕ ನೀಡಿದ್ದೇವೆ ಎಂದರು.

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ನಮ್ಮ ಬಡಾವಣೆಯಲ್ಲಿ ದುರ್ಗಾ ಪರಮೇಶ್ವರಿ ದೇವಸ್ಥಾನ ನಿರ್ಮಿಸಲು ಬಹಳ ವರ್ಷಗಳ ಶ್ರಮವಿದೆ. ನಮ್ಮ ಧಾರ್ಮಿಕ ವಿಚಾರದಲ್ಲಿ ಸಾಥ್ ನೀಡಿದ ಮುಸ್ಲಿಂ ಸಮಾಜ ತಮ್ಮಲ್ಲೇ ದೇಣಿಗೆ ಸಂಗ್ರಹ ಮಾಡಿ ನಮಗೆ ನೀಡಿ ದೇವರ ಕಾರ್ಯಕ್ಕೆ ಧರ್ಮ, ಜಾತಿ ಭೇದವಿಲ್ಲ ಎಂದು ರುಜುವಾತು ಮಾಡಿದ್ದಾರೆ. ಅವರ ಸೌಹಾರ್ದ ಭಾವನೆಗೆ ಬೆಲೆ ನೀಡಿ ಅವರ ದೇಣಿಗೆ ಹಣವನ್ನು ದೇವಾಲಯ ಕೆಲಸಕ್ಕೆ ಬಳಸಿ ಸಾರ್ಥಕಗೊಳಿಸುತ್ತೇವೆ ಎಂದರು.

Advertisements

ಈ ಸಂದರ್ಭದಲ್ಲಿ ಪಪಂ ಸದಸ್ಯ ಶೌಕತ್ ಆಲಿ, ಎಸ್.ಎಸ್ ಬಾಬು, ಮಂಜನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X