ಗುಬ್ಬಿ | ದುಡಿಮೆಯ ಒಂದಂಶ ಶೈಕ್ಷಣಿಕ ಸೇವೆಗೆ ಮುಡುಪು : ಕಳ್ಳಿಪಾಳ್ಯ ಲೋಕೇಶ್

Date:

Advertisements

ಸಮಾಜದಲ್ಲಿ ಗುರುತಿಸಿಕೊಂಡು ಬೆಳೆದ ನಂತರ ತಮ್ಮ ದುಡಿಮೆಯ ಒಂದಂಶ ಸಮಾಜದ ಸೇವೆ ಮುಡಿಪಾಗಿ ಇಡುವುದು ನಿಜವಾದ ಸೇವೆ. ಇದರಲ್ಲಿ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅವಶ್ಯ ಸೌಕರ್ಯ ಒದಗಿಸುವುದು ಪ್ರಸ್ತುತ ದಿನಗಳಲ್ಲಿ ಅರ್ಥಪೂರ್ಣ ಸೇವೆ ಎನಿಸಿಕೊಂಡಿದೆ ಎಂದು ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿ ಕಳ್ಳಿಪಾಳ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನಿ ಸಾಮಾಗ್ರಿ ವಿತರಿಸಿ 64 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಕಳೆದ 25 ವರ್ಷದಿಂದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಲ್ಲಿ ಹುಟ್ಟುಹಬ್ಬವನ್ನು ದುಂದುವೆಚ್ಚ ಮಾಡದೆ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡುವ ನಿಟ್ಟಿನಲ್ಲಿ ಪಾಠೋಪಕರಣ ವ್ಯವಸ್ಥೆ ಮಾಡುತ್ತಾ ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಓದುವ ಮಕ್ಕಳಿಗೆ ಅನುಕೂಲಗಳು ಸಿಗುತ್ತಿಲ್ಲ. ನಮ್ಮ ಬಾಲ್ಯದ ಜೀವನದಲ್ಲಿ ಈ ಸಂಕಷ್ಟ ಅನುಭವಿಸಿದ ಹಿನ್ನಲೆ ಇಂದು ಬಡ ಮಕ್ಕಳಿಗೆ ಶಿಕ್ಷಣ ಒದಗಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಶುಲ್ಕ ಭರಿಸುವುದು, ಉನ್ನತ ವ್ಯಾಸಂಗಕ್ಕೆ ಸಹಕಾರ ಹೀಗೆ ಹಲವು ಸತ್ಕಾರ್ಯ ಮಾಡುವ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಪರದಾಡುವ ಬಡವರಿಗೂ ಸಹಕಾರ ಮಾಡಿದ್ದೀನಿ. ಇಂತಹ ಸಂದರ್ಭದಲ್ಲಿ ಸಾರ್ಥಕ ಬದುಕು ಎಂಬ ಭಾವನೆ ಮನೆ ಮಾಡುತ್ತದೆ. ರಾಜಕೀಯ ಕ್ಷೇತ್ರಕ್ಕಿಂತ ಭಿನ್ನವಾಗಿ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹಿನ್ನಲೆ ಜಾತ್ಯತೀತ ನಿಲುವು ಕಾಣುತ್ತಿದೆ ಎಂದರು.

Advertisements

ರಾಷ್ಟ್ರೀಯ ಹೆದ್ದಾರಿ ಬದಿಯ ನಮ್ಮ ಗ್ರಾಮಕ್ಕೆ ಮೂಲಭೂತ ಸವಲತ್ತುಗಳ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಕೇಂದ್ರ ಸಚಿವ ಸೋಮಣ್ಣ ಅವರಿಂದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಾಣ ಆಗಲಿದೆ. ರೈಲ್ವೆ ಅಂಡರ್ ಪಾಸ್ ಕೂಡಾ ಶೀಘ್ರದಲ್ಲಿ ನಿರ್ಮಾಣ ಆಗಲಿದೆ ಎಂದ ಅವರು ಹುಟ್ಟುಹಬ್ಬ ಆಚರಣೆ ಹಿನ್ನಲೆ ಅಡಗೂರು, ಪ್ರಭುವನಹಳ್ಳಿ, ಸಿಂಗೋನಹಳ್ಳಿ ಶಾಲಾ ಮಕ್ಕಳಿಗೆ ಪುಸ್ತಕಗಳು, ಲೇಖನಿ ಸಾಮಾಗ್ರಿ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಶಾಲಾ ಮಕ್ಕಳಿಗೆ ಹಂಚಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದಿಲೀಪ್ ಕುಮಾರ್, ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಯೋಗಾನಂದಕುಮಾರ್, ಎಂ.ಜಿ.ಶಿವಲಿಂಗಯ್ಯ, ವೀರಭದ್ರೇಗೌಡ, ವೆಂಕಟೇಶ್, ಶಂಕರೇಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X