ಗುಬ್ಬಿ | ಕೆರೆಯಲ್ಲಿ ಮುಳುಗಿದ ಯುವಕ : ಮಳೆಯಲ್ಲಿಯೇ ತೀವ್ರ ಶೋಧ ಬಳಿಕ ಮೃತದೇಹ ಪತ್ತೆ

Date:

Advertisements

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋದ ಶಿರಾ ಮೂಲದ ನಾಲ್ವರ ಪೈಕಿ ಓರ್ವ ಯುವಕ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆಯಲ್ಲೇ ಸತತ 16 ಗಂಟೆ ತೀವ್ರ ಶೋಧ ನಡೆಸಿದ ಬಳಿಕ ಮಂಗಳವಾರ ಬೆಳಿಗ್ಗೆ ಯುವಕನ ದೇಹ ಪತ್ತೆಯಾಗಿದೆ.

ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಮದ್ಯಾಹ್ನ 4 ಗಂಟೆ ಸಮಯದಲ್ಲಿ ಈಜಲು ಹೋದ ನಾಲ್ಕು ಜನರ ಪೈಕಿ ಈಜು ಬಾರದ ರಾಕೇಶ್(28) ಮುಳುಗಿದ್ದ ಯುವಕ ಎನ್ನಲಾಗಿದೆ. ಹೊಸಹಳ್ಳಿಯಲ್ಲಿದ್ದ ಈ ಕೂಲಿ ಕಾರ್ಮಿಕರ ತಂಡ ಜಲ ಜೀವನ್ ಮಿಷನ್ ಕಾಮಗಾರಿ ಮಾಡುತ್ತಿದ್ದರು.

ಹಬ್ಬದ ಹಿನ್ನಲೆ ಊರಿಗೆ ತೆರಳಿ ರಜೆ ಮುಗಿಸಿಕೊಂಡು ಮರಳಿ ಬಂದು ಸೋಮವಾರ ಮಧ್ಯಾಹ್ನ ಕೆರೆಗೆ ಇಳಿದಿದ್ದಾರೆ. ಈ ಸಮಯದಲ್ಲಿ ರಾಕೇಶ್ ನಾಪತ್ತೆಯಾಗಿರುವುದಾಗಿ ಜೊತೆಗಾರರು ಹುಡುಕಾಟ ನಡೆಸಿ ನಂತರ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ನಂತರ ಪೊಲೀಸರೊಂದಿಗೆ ಅಗ್ನಿ ಶಾಮಕ ದಳ ತೀವ್ರ ಹುಡುಕಾಟ ನಡೆಸಿದರು.

Advertisements

ಕತ್ತಲಾದ ಬಳಿಕ ಮಂಗಳವಾರ ಬೆಳಿಗ್ಗೆ ಶೋಧ ಕಾರ್ಯ ಆರಂಭಿಸಿದ ಬಳಿಕ ರಾಕೇಶ್ ಶವ ಪತ್ತೆಯಾಗಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಮುಳುಗು ತಜ್ಞರು ಕಾರ್ಯಾಚರಣೆ ಯಶಸ್ವಿಯಾಗಿ ಮಳೆಯಲ್ಲೇ ನಡೆಸಿದ್ದಾರೆ. ಸೋಮವಾರದಿಂದ ಸ್ಥಳದಲ್ಲಿ ಮೊಕಂ ಹೂಡಿದ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X