ಗುಬ್ಬಿ | ಹಿಂದುಳಿದ ಸಮುದಾಯಕ್ಕೆ ಹೊಸ ದಿಕ್ಕು ತೋರಿದ ‘ಅರಸು‘ : ತಹಶೀಲ್ದಾರ್ ಆರತಿ.ಬಿ

Date:

Advertisements

ಶೋಷಣೆ ಮುಕ್ತ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಮಾಡಿದ ಡಿ.ದೇವರಾಜ ಅರಸು ಅವರ ಶೈಕ್ಷಣಿಕ ಚಿಂತನೆ ಇಂದಿಗೂ ಅವಿಸ್ಮರಣೀಯ ನಿರ್ಣಯಗಳಾಗಿದ್ದವು ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು.

ಗುಬ್ಬಿ ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ರಾಜ್ಯದ 22 ಮುಖ್ಯಮಂತ್ರಿಗಳ ಪೈಕಿ ಅರಸು ಅವರಿಗೆ ಮಾತ್ರ ದಿನಾಚರಣೆ ಅವಕಾಶ ಕಲ್ಪಿಸಲಾಗಿದೆ. ಅಂದಿನ ಸಮಯದಲ್ಲಿ ದೀನ ದಲಿತರಿಗೆ, ಶೋಷಿತ ವರ್ಗಗಳಿಗೆ ಬೆನ್ನೆಲುಬಾಗಿ ನಿಂತು ಮುಂದಿನ ಭವಿಷ್ಯ ಕಟ್ಟಿಕೊಟ್ಟರು. ಅವರ ಆಡಳಿತಾವಧಿಯಲ್ಲಿ ಸಮಾಜ ಸುಧಾರಣಾ ಕ್ರಮಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣವಾಯಿತು. ಈ ಹಿನ್ನಲೆ ಜಯಂತಿ ಆಚರಣೆ ಸರ್ಕಾರಿ ಕಾರ್ಯಕ್ರಮವಾಗಿ ನಡೆಯುತ್ತಿದೆ ಎಂದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿ ನಿರ್ಮಿಸಿದ ವಸತಿ ಶಾಲೆಗಳ ಫಲ ಇಂದು ತಿಳಿಯುತ್ತಿದೆ. ಬಡವರ ಮಕ್ಕಳು ಸಮಾಜದಲ್ಲಿ ಗಣ್ಯ ಸ್ಥಾನ ಪಡೆಯುವಲ್ಲಿ ಅರಸು ಅವರ ವಸತಿ ಶಾಲೆಗಳು ಕಾರಣವಾಗಿದೆ. ಅಹಿಂದ ವರ್ಗದ ಅಭಿವೃದ್ಧಿಗೆ ಹಲವು ನಿಗಮ ಮಂಡಳಿ ಸ್ಥಾಪಿಸಿ ಸಮಾಜದ ಮುಖ್ಯವಾಹಿನಿಗೆ ತಂದು ರಾಜಕೀಯ ಶಕ್ತಿ ಕೂಡ ತುಂಬಿದ್ದರು. ನಗರ ಪಟ್ಟಣ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದರ ಫಲವೇ ಇಂದು ಒಳಚರಂಡಿ ಯೋಜನೆ ಉತ್ತಮ ಯೋಜನೆಯಾಗಿದೆ. ಎಲ್ಲಾ ವರ್ಗವನ್ನು ಸಮಾನವಾಗಿ ಕಂಡು ಕೆಲ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರು. ಈ ಹಿನ್ನಲೆ ಹಿಂದುಳಿದ ವರ್ಗಗಳ ದೈವವಾಗಿ ಅರಸು ಅವರು ಮನದಲ್ಲಿದ್ದಾರೆ ಎಂದರು.

Advertisements

ಉಪನ್ಯಾಸಕ ಕೆ.ಲೋಕೇಶ್ ಮಾತನಾಡಿ 1972 ರಲ್ಲಿ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಿ 1977 ರಲ್ಲಿ ಸಾಕಷ್ಟು ವಿರೋಧದ ನಡುವೆ ಹಿಂದುಳಿದ ವರ್ಗಗಳಿಗೆ ಶೇಕಡಾ 55 ರಷ್ಟು ಮೀಸಲಾತಿ ಜಾರಿಗೆ ತಂದರು. ಜೀತ ಪದ್ಧತಿ ನಿಷೇಧ ಶಾಸನ ಜಾರಿಗೆ ತಂದು ರಾಜ್ಯದ 45 ಸಾವಿರ ಮಂದಿಗೆ ಉತ್ತಮ ಬದುಕು ಕಟ್ಟಿಕೊಟ್ಟರು. ಈ ಜೊತೆ ಮಲ ಹೊರುವ ಪದ್ಧತಿ ನಿಷೇಧ, ಉಳುವವನೇ ಭೂಮಿಯ ಒಡೆಯ ಹೀಗೆ ಅನೇಕ ಕಾಯಿದೆಗಳು ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿ ಎಚ್.ಎಸ್.ಪವಿತ್ರ ಮಾತನಾಡಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ದೇವರಾಜು ಅರಸು ಅವರ ಕೊಡುಗೆ ಅಪಾರ. ರಾಜ್ಯದ ಹಲವು ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ವಸತಿ ಶಾಲೆಗಳ ನಿರ್ಮಾತರಾಗಿ ಹಾಸ್ಟೆಲ್ ಮೂಲಕ ಬಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಸಮಾಜದಲ್ಲಿ ಗಣ್ಯ ಸ್ಥಾನ ಒದಗಿಸಿದೆ. ಹೆಣ್ಣು ಮಕ್ಕಳಿಗೆ ವಿಶೇಷವಾಗಿ ಶಿಕ್ಷಣ ಒದಗಿಸುವ ಪರಿಕಲ್ಪನೆ ಹೊಂದಿದ್ದ ಅರಸು ಅವರ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್, ಉಪಾಧ್ಯಕ್ಷೆ ಶ್ವೇತಾ, ಸದಸ್ಯ ಮಹಮದ್ ಸಾದಿಕ್, ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷ ಪಾಪಣ್ಣ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ವಾಲ್ಮೀಕಿ ಸಮಾಜದ ಮುಖಂಡ ನರಸಿಂಹಮೂರ್ತಿ, ರಾಜು ಕ್ಷತ್ರಿಯ ಸಮಾಜದ ಅಧ್ಯಕ್ಷ ಲಕ್ಷ್ಮೀಕಾಂತರಾಜ್ ಅರಸ್, ಉಪಾಧ್ಯಕ್ಷ ಜಿ.ಆರ್.ಶ್ರೀನಿವಾಸ್, ಪದಾಧಿಕಾರಿಗಳಾದ ಮಂಜುನಾಥ್ ಅರಸ್, ಪುರುಷೋತ್ತಮ್ ಅರಸ್, ಜಯರಾಮ್ ಅರಸ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಚಾಮರಾಜನಗರ | ರಾಜ್ಯದ ಅಭಿವೃದ್ಧಿ, ಆಡಳಿತ ಸುಧಾರಣೆಗೆ ದೇವರಾಜ ಅರಸು ಕೊಡುಗೆ ಅಪಾರ

ಚಾಮರಾಜನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

Download Eedina App Android / iOS

X