ಗುಬ್ಬಿ | ಎಸ್ಸಿ ಎಸ್ಟಿ ಸೌಲಭ್ಯ ಬೇರೆಯವರ ಪಾಲಾಗುತ್ತಿರುವ ಬಗ್ಗೆ ಎಚ್ಚರವಹಿಸಿ : ಪಹಣಿ ನೀಡುವ ಮುಗ್ಧ ದಲಿತರಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಕಿವಿ ಮಾತು

Date:

Advertisements

ಸರ್ಕಾರ ದಲಿತರ ಅಭಿವೃದ್ಧಿಗೆ ಹಲವು ಇಲಾಖೆಯ ಮೂಲಕ ಸಬ್ಸಿಡಿ ಹಾಗೂ ಉಚಿತ ಸೌಲಭ್ಯ ಒದಗಿಸುತ್ತದೆ. ಆದರೆ ವಾಸ್ತವದಲ್ಲಿ ಇತರರು ಗ್ರಾಮೀಣ ಮುಗ್ಧ ದಲಿತರ ಪಹಣಿ ಬಳಸಿ ಉಚಿತ ಹಾಗೂ ಸಬ್ಸಿಡಿ ಸೌಲಭ್ಯ ಪಡೆದುಕೊಳ್ಳುವ ಬಗ್ಗೆ ದಲಿತ ಮುಖಂಡರು ನಿಗಾ ವಹಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕಿವಿ ಮಾತು ಹೇಳಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ನೀಡುವ ಯೋಜನೆ, ಕಾರ್ಯಕ್ರಮ ಬಗ್ಗೆ ಮಾಹಿತಿ ತಿಳಿಯದ ಗ್ರಾಮೀಣ ದಲಿತರಿಗೆ ಮಾಹಿತಿ ಒದಗಿಸಿ ಅನುಕೂಲ ಮಾಡಿಕೊಡುವ ಕೆಲಸ ಮುಖಂಡರು ಮಾಡಬೇಕು. ಬಡ ದಲಿತರ ಏಳಿಗೆಗೆ ಶ್ರಮಿಸುವ ಕೆಲಸಕ್ಕೆ ಯಾವ ಸಮಯದಲ್ಲಿ ಬಂದರೂ ನಾನು ಸಿದ್ದನಿರುತ್ತೇನೆ ಎಂದು ಕರೆ ನೀಡಿದರು.

ಪೊಲೀಸರು ದಲಿತರ ದೂರು ಬಂದಲ್ಲಿ ತಾರತಮ್ಯ ಮಾಡುತ್ತಾರೆ ಎಂಬ ವಿಚಾರದಿಂದ ಸಭೆ ಆರಂಭವಾಯಿತು. ನಂತರ ಹೋಬಳಿವಾರು ಕೆಲ ಇಲಾಖಾಧಿಕಾರಿಗಳು ಜನರಿಗೆ ಸಿಗುತ್ತಿಲ್ಲ ಎಂಬ ದೂರು ಕೇಳಿಬಂತು. ತಕ್ಷಣ ಶಾಸಕರು ಹೋಬಳಿ ಮಟ್ಟದ ಅಧಿಕಾರಿಗಳು ಆಯಾ ಕಚೇರಿಯಲ್ಲಿ ಬೆಳಿಗ್ಗೆ ಸಮಯದಲ್ಲಿ ನಿಗದಿತವಾಗಿ ಸಾರ್ವಜನಿಕರ ಅಹವಾಲು ನೋಡಬೇಕು ಎಂದು ಸೂಚಿಸಿದರು. ಸರ್ಕಾರದ ದಲಿತ ಪರ ಯೋಜನೆಗಳ ಬಗ್ಗೆ ಸೂಚನಾ ಫಲಕದಲ್ಲಿ ಪ್ರಕಟಿಸಿ ಮಾಧ್ಯಮ ಮೂಲಕ ಜಾಹೀರಾತು ನೀಡಲು ಕೆಲ ಇಲಾಖೆಗೆ ಸಲಹೆ ನೀಡಿದರು.

Advertisements

ರಸ್ತೆ ಒತ್ತುವರಿ, ಗೋಮಾಳ ಹಕ್ಕುಪತ್ರ, ವಿದ್ಯುತ್ ಟಿಸಿ ಅಳವಡಿಕೆ, ಜಮೀನು ವಿವಾದ ಹೀಗೆ ಹಲವು ವಿಚಾರ ಅರ್ಜೀವಾರು ಚರ್ಚೆ ನಡೆಸಲಾಯಿತು. ಈ ಮಧ್ಯೆ ರಸ್ತೆ ಬದಿ ಉಳುಮೆ ಮಾಡುವವರ ವಿರುದ್ಧ ಕ್ರಮಕ್ಕೆ ಇಂಜಿನಿಯರ್ ಗಳಿಗೆ ತಿಳಿಸಿದರು. ದಲಿತ ಮಕ್ಕಳ ಶಿಕ್ಷಣಕ್ಕೆ ಗ್ರಾಮ ಪಂಚಾಯಿತಿ ಮೂಲಕ ಆರ್ಥಿಕ ನೆರವು ನೀಡಲು ಕೆಲ ಕಾರ್ಯಕ್ರಮ ಹಣ ಬಳಕೆ ಮಾಡಲಾಗುತ್ತಿದೆ. ಶಿಕ್ಷಣಕ್ಕೆ ಮೊದಲ ಆದ್ಯತೆ ಮೇರೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮೀಸಲು ಹಣ ಬಳಕೆ ಮಾಡಲಾಗಿದೆ ಎಂದರು.

ಸರ್ಕಾರದ ಸಾಲ ಸೌಲಭ್ಯ ಒದಗಿಸುವ ಬ್ಯಾಂಕ್ ಅಧಿಕಾರಿಗಳ ನಡವಳಿಕೆ ಬಗ್ಗೆ ಸುಧೀರ್ಘ ಚರ್ಚೆ ನಡೆದು ಎಲ್ಲಾ ದಾಖಲಾತಿ ಪಡೆದು ಕೊನೆಯಲ್ಲಿ ನಿಮ್ಮ ಸಿಬಿಲ್ ಸ್ಕೋರ್ ಬಂದಿಲ್ಲ ಎನ್ನುತ್ತಾರೆ. ಇದು ಖಂಡನೀಯ ಎಂದು ಮುಖಂಡರು ಒಕ್ಕೊರಲಿನ ಖಂಡನೆ ವ್ಯಕ್ತ ಪಡಿಸಿದರು. ನಂತರ ಉತ್ತರಿಸಿದ ಶಾಸಕರು ಈ ಗಂಭೀರ ಸಮಸ್ಯೆ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಶೀಘ್ರದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸುವ ಭರವಸೆ ನೀಡಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಹಣ ಬೇಡಿಕೆ ಬಗ್ಗೆ, ಪಂಚಾಯಿತಿ ಖಾತೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ತಾಲ್ಲೂಕು ಕಚೇರಿ ಮುಂದೆ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒಕ್ಕೊರಲಿನ ಬೇಡಿಕೆ ಘೋಷಣೆ ಮಾಡುವ ಮೂಲಕ ಕೇಳಿದರು. ಸರ್ಕಾರದ ವೆಚ್ಚದಲ್ಲಿ ಈ ಕಾರ್ಯಕ್ರಮ ಮಾಡಲಾಗದು. ಮುಖಂಡರು ಒಗ್ಗೂಡಿ ಪುತ್ಥಳಿ ಸಿದ್ಧಪಡಿಸಿದರೆ ಸೂಕ್ತ ಸ್ಥಳದಲ್ಲಿ ಅನಾವರಣ ಮಾಡುವ ಭರವಸೆ ನೀಡಿದರು. ಹಲವು ಸಮಸ್ಯೆಗೆ ಖುದ್ದು ಭೇಟಿ ನೀಡಿ ಬಗೆಹರಿಸುವ ಭರವಸೆ ಜೊತೆಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿಯೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸೂಚಿಸಿದರು.

WhatsApp Image 2024 08 28 at 6.46.13 PM

ದಲಿತರ ಕುಂದು ಕೊರತೆಗಳ ಸಭೆಗೆ ತಟ್ಟಿದ ಪ್ರತಿಭಟನೆ ಬಿಸಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯ ಆರಂಭಕ್ಕೆ ಮುನ್ನ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆಯನ್ನು ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮುಂದೆ ಇ ಸ್ವತ್ತು ಮಾಡುವ ವಿಚಾರದಲ್ಲಿ ಪಿಡಿಓ ವಿಳಂಬ ಅನುಸರಿಸುತ್ತಿರುವುದು ಹಾಗೂ ಹಕ್ಕುಪತ್ರ ವಿತರಣೆ ಮಾಡುತ್ತಿಲ್ಲ ಎಂಬ ವಿಚಾರ ಕುರಿತು ಮುಖಂಡರು ಧರಣಿ ಕುಳಿತರು. ಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ದಲಿತರ ವಿರೋಧಿ ಎಂದು ದೂರಿದರು. ನಂತರ ಸ್ಥಳಕ್ಕೆ ತಹಶೀಲ್ದಾರ್ ಆರತಿ ಹಾಗೂ ತಾಪಂ ಇಓ ಶಿವಪ್ರಕಾಶ್ ಆಗಮಿಸಿ ಹದಿನೈದು ದಿನದಲ್ಲಿ ಕಾನೂನು ರೀತಿ ಕ್ರಮ ವಹಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಸಭೆಯಲ್ಲಿ ತಹಶೀಲ್ದಾರ್ ಬಿ.ಆರತಿ, ತಾಪಂ ಇಓ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕರಾದ ವೀಣಾ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X