ಗುಬ್ಬಿ | ಇಡಗೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿ ಛೇರ್ಮನ್ ರವಿ ಅವಿರೋಧ ಆಯ್ಕೆ

Date:

Advertisements

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.

ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇಡಗೂರು ಸಾಲಗಾರ ಕ್ಷೇತ್ರ ಸಾಮಾನ್ಯ ಮೀಸಲಿನಲ್ಲಿ ಜಿ.ಯತೀಶ್ ಅಧ್ಯಕ್ಷರಾಗಿ ಹಾಗೂ ಹಾರನಪಾಳ್ಯ ಸಾಲಗಾರ ಕ್ಷೇತ್ರ ಓಬಿಸಿ (ಬಿ) ಮೀಸಲಿನ ಎಚ್.ಡಿ.ಶ್ರೀನಿವಾಸ್ ಈ ಇಬ್ಬರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಯತೀಶ್ ಮಾತನಾಡಿ ರೈತರ ಕೃಷಿ ಅನುಕೂಲಕ್ಕೆ ತಕ್ಕಂತೆ ಸೊಸೈಟಿ ಕೆಲಸ ಮಾಡುತ್ತಿದೆ. ರೈತರ ಅಭಿವೃದ್ಧಿಗೆ ಪೂರಕ ಯೋಜನೆ ಹಾಗೂ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು ಆರ್ಥಿಕ ವಹಿವಾಟು ಸಹ ನಡೆಸಿದೆ. ಕೃಷಿ ಪರಿಕರ ಖರೀದಿ ಹಾಗೂ ಕೃಷಿ ಸಾಲ ನೀಡುತ್ತಾ ಇಡಗೂರು ಸುತ್ತಲಿನ ರೈತರ ನೆರವಿಗೆ ನಿಂತ ಈ ಸಂಘವನ್ನು ಉತ್ತಮ ಬ್ಯಾಂಕ್ ಆಗಿ ಮೇಲ್ದರ್ಜೆಗೇರಿಸುವ ಆಲೋಚನೆ ಇದೆ. ಎಲ್ಲಾ ಸದಸ್ಯರ ಒಮ್ಮತದಲ್ಲಿ ಸಂಘ ಅಭಿವೃದ್ದಿ ಪಡಿಸುತ್ತೇವೆ ಎಂದರು.

Advertisements

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಂಘದ ಸದಸ್ಯರಾದ ಪ್ರಶಾಂತ್, ನರಸಿಂಹಮೂರ್ತಿ, ಮನೋಹರ್, ಶಿವಕುಮಾರ್, ಉಮಾ, ಅನುಸೂಯ, ದೇವರಾಜ್, ಐ.ಎನ್.ಮನೋಹರ್, ಗಫಾರ್, ರಮೇಶ್ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X