ಗುಬ್ಬಿ | ದೇವನಹಳ್ಳಿ ಹೋರಾಟಕ್ಕೆ ಜಯ : ರೈತ ಸಂಘದಿಂದ ಸಂಭ್ರಮಾಚರಣೆ

Date:

Advertisements

ದೇವನಹಳ್ಳಿ ಚನ್ನರಾಯಪಟ್ಟಣ ರೈತರ ಸಾವಿರ ದಿನಗಳ ಹೋರಾಟಕ್ಕೆ ಕೊನೆಗೂ ಮಹತ್ವದ ಜಯ ದೊರಕಿದೆ. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ ಹಿನ್ನಲೆ ಗುಬ್ಬಿ ಪಟ್ಟಣ ಬಸ್ ಸ್ಟ್ಯಾಂಡ್ ಬಳಿ ರೈತ ಸಂಘದ ಪದಾಧಿಕಾರಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ರೈತರ ಹೋರಾಟ ಎಂದಿಗೂ ಗಟ್ಟಿತನ ಬೆಳೆಸಿಕೊಂಡಿದೆ. ರೈತರು ತಮ್ಮ ಕೃಷಿ ಭೂಮಿ ಬಿಟ್ಟು ಕೊಡುವುದಿಲ್ಲ. ನಿರಂತರ 1200 ದಿನಗಳ ಸುಧೀರ್ಘ ಹೋರಾಟ ಎಲ್ಲೂ ದಿಕ್ಕು ತಪ್ಪದೆ ನಡೆಸಿದ್ದರ ಫಲ ಸರ್ಕಾರ ರೈತರ ಮುಂದೆ ಸೋತಿದೆ. ಕೆ ಐಡಿಬಿಎಲ್ ಮೂಲಕ ಭೂಮಿ ವಶಕ್ಕೆ ಪಡೆಯಲು ಮುಂದಾದಾಗ ರೈತರ ವಿರೋಧ ವ್ಯಕ್ತಪಡಿಸಿದ್ದರು. ಹೋರಾಟದ ತೀವ್ರತೆ ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ರೈತ ಪರ ನಿರ್ಧಾರ ಕೈಗೊಂಡಿದ್ದಾರೆ. ಈ ರೀತಿಯ ದಿಟ್ಟ ಹೋರಾಟ ನಮ್ಮ ಜಿಲ್ಲೆಯಲ್ಲಿ ಹೇಮಾವತಿ ನೀರಿಗಾಗಿ ನಡೆಯಬೇಕಿದೆ. ಇಲ್ಲಿಯೂ ರೈತರು ಇದೇ ಮಾದರಿ ಅನುಸರಿಸಿ ಯಾವುದೇ ಬೆದರಿಕೆಗೆ ಅಂಜದೆ ನಿರಂತರ ಹೋರಾಟ ನಡೆಸಿ ಹೋರಾಟ ಸಫಲ ಗೊಳಿಸಬೇಕಿದೆ. ಹೇಮಾವತಿ ಲಿಂಕ್ ಕೆನಾಲ್ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ನಡೆಯಲಿದೆ ಎಂದಿರುವುದು ಸರಿಯಲ್ಲ. ಈ ಹೇಳಿಕೆ ಹಿಂಪಡೆದು ಜಿಲ್ಲೆಯ ರೈತರ ಪರ ನಿಲ್ಲಬೇಕು ಎಂದು ಒತ್ತಾಯಿಸಿದ ಅವರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಂತೆ ನಮ್ಮ ಜಿಲ್ಲೆಯಲ್ಲಿ ರೈತ ಮುಖಂಡರ ಸಭೆ ನಡೆಸಿದರೆ ಹೇಮಾವತಿ ವಿಚಾರ ಮನದಟ್ಟು ಮಾಡುತ್ತೇವೆ ಎಂದರು.

1001737395

ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ದೇವನಹಳ್ಳಿ ಚನ್ನರಾಯಪಟ್ಟಣ ರೈತರ ದಿಟ್ಟತನಕ್ಕೆ ಸರ್ಕಾರ ಮಂಡಿಯೂರಿದೆ. ಸಿಎಂ ನೇತೃತ್ವದ ಸಭೆಯಲ್ಲಿ ಸರ್ಕಾರ 13 ಹಳ್ಳಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. 1198 ದಿನಗಳ ಇಂತಹ ಹೋರಾಟ ನಮ್ಮ ಜಿಲ್ಲೆಯಲ್ಲಿ ಕಾಣುತ್ತಿಲ್ಲ. ರೈತರ ಜೀವನಾಡಿ ಹೇಮಾವತಿ ನೀರು ನಮ್ಮಿಂದ ಕೈ ಬಿಡುತ್ತಿದೆ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳಲ್ಲೇ ಒಮ್ಮತ ಮೂಡುತ್ತಿಲ್ಲ. ರೈತರೇ ದೇವನಹಳ್ಳಿ ಹೋರಾಟವನ್ನೇ ಮುಂದಿಟ್ಟುಕೊಂಡು ದಿಟ್ಟ ಹೋರಾಟಕ್ಕೆ ಮುಂದಾಗಿ ಹೋರಾಟ ನಡೆಸಬೇಕಿದೆ. ಸರ್ಕಾರವೇ ರೈತರ ಒಕ್ಕೊರಲಿನ ಆಗ್ರಹಕ್ಕೆ ಮಣಿಯಬೇಕಿದೆ. ನಾವು ಹೇಮಾವತಿ ಉಳಿಸಲು ಈ ಮಾದರಿಯಲ್ಲೇ ಹೋರಾಟ ನಡೆಸೋಣ. ಸರ್ಕಾರದ ಗಮನ ಸೆಳೆದು ಇದೇ ರೀತಿ ಸಭೆಯಲ್ಲಿ ಕಾಮಗಾರಿ ರದ್ದು ಮಾಡಿಸೋಣ ಎಂದು ಕರೆ ನೀಡಿದರು.

Advertisements

ಈ ಸಂದರ್ಭದಲ್ಲಿ ರೈತಸಂಘದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ರೈತ ಮುಖಂಡರಾದ ಕಾಳೆಗೌಡ, ಗಂಗರೇವಣ್ಣ, ದೇವೇಗೌಡ, ಬಡವನಪಾಳ್ಯ ಕುಮಾರಸ್ವಾಮಿ, ನಾಗರಾಜು, ಸತ್ತಿಗಪ್ಪ, ಬಸವರಾಜು, ಸಣ್ಣಪ್ಪ, ಯತೀಶ್, ಎ.ಎಸ್.ಬಸವರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X