ಗುಬ್ಬಿ | ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ರೈತಸಂಘಕ್ಕೆ ಮತ್ತಷ್ಟು ಬಲ : ಕೆ.ಎನ್.ವೆಂಕಟೇಗೌಡ

Date:

ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು.

- Advertisement -

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ರೈತರ ಪರವಾಗಿ ಪುಷ್ಪಮಾಲೆ ಸಮರ್ಪಿಸಿ ಮಾತನಾಡಿದ ಅವರು ಬಡವರು ದೀನ ದಲಿತರ ಪರ ನಿಲ್ಲುವ ಕೆಚ್ಚು ತುಂಬುವ ಮಹಾನಾಯಕರ ಪ್ರತಿಮೆ ತಾಲ್ಲೂಕು ಕಚೇರಿ ಕಡೆಗೆ ಬೊಟ್ಟು ತೋರುತ್ತಿರುವುದು ಹೆಮ್ಮೆ ತಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಸರಿ ದಾರಿ ತೋರುವ ಹಾಗೂ ಸಮ ಸಮಾಜ ನಿರ್ಮಾಣಕ್ಕೆ ಅಗತ್ಯ ಕಾನೂನು ಸಂವಿಧಾನ ನೀಡಿದ ಅವರ ಆಶಯದಂತೆ ಇಂದಿನ ಸರ್ಕಾರಗಳು ನಡೆದುಕೊಳ್ಳುತ್ತಿಲ್ಲ. ಬಡವರಿಗೆ ನೀಡಬೇಕಾದ ಭೂಮಿಯನ್ನು ಮಂಜೂರು ಮಾಡದೆ ಅರ್ಜಿ 50, 53, 57 ನಮೂನೆ ಪೆಡ್ಡಿಂಗ್ ಇಟ್ಟಿರುವುದು ತೀವ್ರ ಅಸಮಾಧಾನ ತಂದಿದೆ. ಈ ಬಗ್ಗೆ ಹೋರಾಟ ನಡೆಸಲು ರೈತಸಂಘ ಸಜ್ಜಾಗಿದೆ ಎಂದ ಅವರು ಅಂಬೇಡ್ಕರ್ ಅವರ ಕಾಲದಲ್ಲಿದ್ದ ಶೇ.10 ರಷ್ಟು ಭ್ರಷ್ಟಾಚಾರ ಎಂದು ಶೇ.80 ಕ್ಕೆ ಏರಿಕೆಯಾಗಿರುವುದು ವಿಷಾದನೀಯ. ಇನ್ನಾದರೂ ಅಂಬೇಡ್ಕರ್ ಪುತ್ಥಳಿ ನೋಡಿಯಾದರೂ ಅವರ ಆಶಯದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ನಡೆದುಕೊಳ್ಳಲಿ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಲೋಕೇಶ್ ಅವರ ತಂಡ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಮಾಲೆ ಹಾಕಿದರು. ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ರವೀಶ್, ಸುರೇಶ್, ಬಸವರಾಜು, ಈಶಣ್ಣ, ಯತೀಶ್, ಬಾಂಬೆ ಬಸವರಾಜು, ಮೋಹನ್, ಗಂಗರೇವಣ್ಣ, ನರಸಿಂಹಮೂರ್ತಿ, ರಮೇಶ್ ಸೇರಿದಂತೆ ರೈತಸಂಘದ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...