ತುಮಕೂರು | ಮಳೆಗೆ ಗುಬ್ಬಿ ಸರ್ಕಾರಿ ಆಸ್ಪತ್ರೆ ಜಲಾವೃತ : ರೋಗಿಗಳ ಪರದಾಟ!

Date:

Advertisements

ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.

ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ ಒಂದೇ ವೇಗದಲ್ಲಿ ಸುರಿದು ಹೆದ್ದಾರಿ ಬದಿಯ ತಗ್ಗು ಪ್ರದೇಶದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಳೆ ನೀರು ಹರಿದಿದೆ. ಪ್ರತಿ ನಿಮಿಷಕ್ಕೆ ಹೆಚ್ಚಾದ ನೀರು ಅರ್ಧ ಗಂಟೆಯಲ್ಲಿ ಮೊದಲ ಅಂತಸ್ತಿನ ಕಟ್ಟಡ ತುಂಬಾ ನೀರು ಶೇಖರಣೆಯಾಗಿದೆ. ತಕ್ಷಣಕ್ಕೆ ಆತಂಕ ಮೂಡಿಸಿದ ಮಳೆ ನೀರು ನೋಡ ನೋಡುತ್ತಿದ್ದಂತೆ ಒಳ ರೋಗಿಗಳ ವಾರ್ಡ್ ಗಳತ್ತ ಹರಿದು ನಂತರ ಐಸಿಯು ಘಟಕದತ್ತ ನೀರು ಹರಿದಿದೆ.

ಒಳ ರೋಗಿಗಳ ದಾಖಲಾತಿ ಪ್ರಕಾರ 11 ಪುರುಷರು, 5 ಮಂದಿ ಮಹಿಳಾ ರೋಗಿಗಳನ್ನು ಮೇಲಂತಸ್ತಿಗೆ ಶಿಫ್ಟ್ ಮಾಡಿದ ಸಿಬ್ಬಂದಿ ತಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಬೆಳಗ್ಗೆ ಮಳೆ ನೀರು ಹೊರ ಹಾಕುವ ಕೆಲಸ ಮಾಡಲಾಯಿತು.

Advertisements
1001222783

100 ಹಾಸಿಗೆಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಎನ್ನುವ ಅಂಶಕ್ಕೆ ಕಳಂಕವಾಗಿ ಮಳೆ ನೀರು ವ್ಯವಸ್ಥಿತವಾಗಿ ಹರಿಸುವ ಚರಂಡಿ ಇಲ್ಲದಿರುವುದು ವಿಪರ್ಯಾಸ. ಒಳ ಹೊಕ್ಕ ನೀರು ನಮಗೆ ಭಯ ತಂದಿತು ಎಂದು ರೋಗಿಗಳ ಜೊತೆ ಇದ್ದ ಸಂಬಂಧಿಕರ ಅಳಲು ತೋಡಿಕೊಂಡರು.

ಹೆದ್ದಾರಿ ರಸ್ತೆಗಿಂತ ತಗ್ಗಿನಲ್ಲಿ ಆಸ್ಪತ್ರೆಯ ಕಟ್ಟಡ ಇದ್ದು, ಈ ಹಿಂದೆ ರಸ್ತೆಯಲ್ಲಿ ಹರಿಯುವ ನೀರು ಆಸ್ಪತ್ರೆಯ ಅವರಣಕ್ಕೆ ಬರುತ್ತಿತ್ತು. ಇದರ ನಿಯಂತ್ರಣಕ್ಕೆ ಕೆಲ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದರೂ ಜೋರು ಮಳೆಗೆ ಇಡೀ ಕಟ್ಟಡ ಜಲ ದಿಗ್ಬಂಧನಕ್ಕೆ ಒಳಗಾಯಿತು. ತಗ್ಗು ಪ್ರದೇಶದ ಕಟ್ಟಡಕ್ಕೆ ಮಳೆ ನೀರು ಬಾರದಂತೆ ಕೂಡಲೇ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X