ತುಮಕೂರು | ಮಳೆಗೆ ಗುಬ್ಬಿ ಸರ್ಕಾರಿ ಆಸ್ಪತ್ರೆ ಜಲಾವೃತ : ರೋಗಿಗಳ ಪರದಾಟ!

Date:

Advertisements

ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.

ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ ಒಂದೇ ವೇಗದಲ್ಲಿ ಸುರಿದು ಹೆದ್ದಾರಿ ಬದಿಯ ತಗ್ಗು ಪ್ರದೇಶದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಳೆ ನೀರು ಹರಿದಿದೆ. ಪ್ರತಿ ನಿಮಿಷಕ್ಕೆ ಹೆಚ್ಚಾದ ನೀರು ಅರ್ಧ ಗಂಟೆಯಲ್ಲಿ ಮೊದಲ ಅಂತಸ್ತಿನ ಕಟ್ಟಡ ತುಂಬಾ ನೀರು ಶೇಖರಣೆಯಾಗಿದೆ. ತಕ್ಷಣಕ್ಕೆ ಆತಂಕ ಮೂಡಿಸಿದ ಮಳೆ ನೀರು ನೋಡ ನೋಡುತ್ತಿದ್ದಂತೆ ಒಳ ರೋಗಿಗಳ ವಾರ್ಡ್ ಗಳತ್ತ ಹರಿದು ನಂತರ ಐಸಿಯು ಘಟಕದತ್ತ ನೀರು ಹರಿದಿದೆ.

ಒಳ ರೋಗಿಗಳ ದಾಖಲಾತಿ ಪ್ರಕಾರ 11 ಪುರುಷರು, 5 ಮಂದಿ ಮಹಿಳಾ ರೋಗಿಗಳನ್ನು ಮೇಲಂತಸ್ತಿಗೆ ಶಿಫ್ಟ್ ಮಾಡಿದ ಸಿಬ್ಬಂದಿ ತಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಬೆಳಗ್ಗೆ ಮಳೆ ನೀರು ಹೊರ ಹಾಕುವ ಕೆಲಸ ಮಾಡಲಾಯಿತು.

Advertisements
1001222783

100 ಹಾಸಿಗೆಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಎನ್ನುವ ಅಂಶಕ್ಕೆ ಕಳಂಕವಾಗಿ ಮಳೆ ನೀರು ವ್ಯವಸ್ಥಿತವಾಗಿ ಹರಿಸುವ ಚರಂಡಿ ಇಲ್ಲದಿರುವುದು ವಿಪರ್ಯಾಸ. ಒಳ ಹೊಕ್ಕ ನೀರು ನಮಗೆ ಭಯ ತಂದಿತು ಎಂದು ರೋಗಿಗಳ ಜೊತೆ ಇದ್ದ ಸಂಬಂಧಿಕರ ಅಳಲು ತೋಡಿಕೊಂಡರು.

ಹೆದ್ದಾರಿ ರಸ್ತೆಗಿಂತ ತಗ್ಗಿನಲ್ಲಿ ಆಸ್ಪತ್ರೆಯ ಕಟ್ಟಡ ಇದ್ದು, ಈ ಹಿಂದೆ ರಸ್ತೆಯಲ್ಲಿ ಹರಿಯುವ ನೀರು ಆಸ್ಪತ್ರೆಯ ಅವರಣಕ್ಕೆ ಬರುತ್ತಿತ್ತು. ಇದರ ನಿಯಂತ್ರಣಕ್ಕೆ ಕೆಲ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದರೂ ಜೋರು ಮಳೆಗೆ ಇಡೀ ಕಟ್ಟಡ ಜಲ ದಿಗ್ಬಂಧನಕ್ಕೆ ಒಳಗಾಯಿತು. ತಗ್ಗು ಪ್ರದೇಶದ ಕಟ್ಟಡಕ್ಕೆ ಮಳೆ ನೀರು ಬಾರದಂತೆ ಕೂಡಲೇ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X