ಗುಬ್ಬಿ | ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಗುಬ್ಬಿ ತಾಲೂಕು ರೈತ ಸಂಘ

Date:

Advertisements

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ, ಹೊಸಹಳ್ಳಿ ಕ್ರಾಸ್ ನಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ, ಶಾಲೆಯ ಬಿಸಿಯೂಟ ಸಿಬ್ಬಂದಿಗಳ ಗೌರವಧನ ಕನಿಷ್ಠ 12 ಸಾವಿರ ನೀಡಬೇಕು, ತಾಲ್ಲೂಕಿನ ಬಿಕ್ಕೆಗುಡ್ಡ ಹೇಮಾವತಿ ನೀರು ಯೋಜನೆ ಪೂರ್ಣಗೊಳಿಸುವುದು ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಡಿಜಿಟಲ್ ಸ್ಕ್ಯಾನಿಂಗ್, ಎಕ್ಸರೇ ಅಳವಡಿಕೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಬೇಡಿಕೆ ಪತ್ರವನ್ನು ತಲುಪಿಸುವಂತೆ ತಾಲ್ಲೂಕು ಆಡಳಿತಕ್ಕೆ ಆಗ್ರಹಿಸಿದರು.

ಬಿಸಿಯೂಟ ತಯಾರಿಸುವ ಸಿಬ್ಬಂದಿಗಳು ಕೇವಲ ಮೂರರಿಂದ ನಾಲ್ಕು ಸಾವಿರಕ್ಕೆ ಕೆಲಸ ಮಾಡುತ್ತಾರೆ. ಈ ಗೌರವಧನಕ್ಕೆ ಕೆಲಸ ಮಾಡದೆ ಸಿಬ್ಬಂದಿಗಳು ಅನ್ಯ ಉದ್ಯೋಗ ಹುಡುಕಿ ಹೊರಟಿದ್ದಾರೆ. ಬಿಸಿಯೂಟ ಮಕ್ಕಳಿಗೆ ಇಲ್ಲವಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಬಿಸಿಯೂಟ ಯೋಜನೆ ನಿಂತು ಹೋಗುವ ಮುನ್ನ ಅಡುಗೆ ತಯಾರಕರಿಗೆ ಕನಿಷ್ಠ ವೇತನದಡಿ 12 ಸಾವಿರ ವೇತನ ನೀಡಬೇಕು ಎಂದು ರೈತ ಸಂಘದ ತಾಲ್ಲೂಕು ಪ್ರದಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಒತ್ತಾಯಿಸಿದರು.

ಗುಬ್ಬಿ ತಾಲ್ಲೂಕಿನಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸಲು ತೋಟಸಾಗರ ಗೇಟ್ ಬಳಿ ನಿರ್ಮಾಣ ಮಾಡಿದ ವಿದ್ಯುತ್ ಸರಬರಾಜು ಉಪ ಕೇಂದ್ರ ಉದ್ಘಾಟನೆ ಮಾಡಿ ರೈತರಿಗೆ ವಿದ್ಯುತ್ ನೀಡಲು ಸಜ್ಜಾದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಮುಂದಿನ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರುವ ಮುನ್ನ ಉಪಕೇಂದ್ರ ಆರಂಭಿಸಿ ಎಂದು ಒತ್ತಾಯಿಸಿದ ರೈತರು ಹೇಮಾವತಿ ಜಿಲ್ಲೆಯ ಜೀವನಾಡಿ ಅದನ್ನು ರಾಮನಗರದತ್ತ ತೆಗೆದುಕೊಂಡು ಹೋಗುವುದು ಸರಿಯಲ್ಲ. ಇಲ್ಲಿನ ರೈತರಿಗೆ ವಿಷ ನೀಡಿದಂತೆ ಆಗುವ ಕಾರಣ ಅವೈಜ್ಞಾನಿಕ ಪೈಪ್ ಲೈನ್ ಕಾಮಗಾರಿ ನಿಲ್ಲಿಸಿ ಮುಖ್ಯನಾಲೆಯ ಮೂಲಕ ನೀರು ಪಡೆಯಲು ಸರ್ಕಾರವನ್ನು ಒತ್ತಾಯಿಸಿದರು.

Advertisements

ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ರೈತ ಸಂಘದ ಪದಾಧಿಕಾರಿಗಳು ಬೇಡಿಕೆ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಕುಮಾರಸ್ವಾಮಿ, ಸತ್ತಿಗಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X