ಗುಬ್ಬಿ | ಜಲ ಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರ, ಸ್ಥಳೀಯ ಪಂಚಾಯಿತಿ ಹಣವಿದೆ : ಶಾಸಕ ಎಸ್.ಆರ್.ಶ್ರೀನಿವಾಸ್.

Date:

Advertisements

ಪ್ರತಿ ಮನೆಗೆ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ ಯೋಜನೆ ಕೇಂದ್ರ ಸರ್ಕಾರದ ಕಾರ್ಯಕ್ರಮ ಎನ್ನಲಾಗಿದೆ. ಆದರೆ ವಾಸ್ತವದಲ್ಲಿ ರಾಜ್ಯ ಸರ್ಕಾರ, ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಜನರ ವಂತಿಕೆ ಹಣ ಸೇರಿ ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಪ್ರತಿಕ್ರಿಯಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ರೈತ ಸಂಜೀವಿನಿ ವಾಹನ ಚಾಲನೆ ಹಾಗೂ ರೈತರಿಗೆ ಕೃಷಿ ಯಂತ್ರೋಪಕರಣ ವಿತರಿಸಿ ಮಾತನಾಡಿದ ಅವರು ಜೆಜೆಎಂ ಯೋಜನೆ ಕೇಂದ್ರ ಸರ್ಕಾರದ ಕಾರ್ಯಕ್ರಮ ಮಾತ್ರ ನಡೆದಿದೆ ಎನ್ನುವ ತುರುವೇಕೆರೆ ಶಾಸಕರ ಮಾತಿಗೆ ಪ್ರತಿಕ್ರಿಯಿಸಿ ಶೇಕಡಾವಾರು ಎಲ್ಲಾ ಮೂಲದ ಅನುದಾನ ಬಳಕೆ ಮಾಡಿದ ಜಲ ಜೀವನ್ ಮಿಷನ್ ಯೋಜನೆ ರಾಜ್ಯ ಸರ್ಕಾರ ಕೂಡಾ ಅನುದಾನ ನೀಡಿದೆ ಎಂದರು.

ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಜೆಜೆಎಂ ಕಾಮಗಾರಿ ಮೊದಲ ಹಂತದಲ್ಲಿ ಕೆಲ ನ್ಯೂನ್ಯತೆ ಕಂಡಿದೆ. ಕಾಂಕ್ರೀಟ್ ರಸ್ತೆ ಕಟ್ ಮಾಡಿದ ನಂತರ ರಸ್ತೆ ದುರಸ್ಥಿ ಮಾಡಬೇಕಿದೆ. ಮೂರು ಅಡಿಗಳ ಆಳದಲ್ಲಿ ಪೈಪ್ ಲೈನ್ ಅಳವಡಿಸಬೇಕು. ಇವೆಲ್ಲವನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಗ್ರಾಮ ಪಂಚಾಯಿತಿಗೆ ಹತಾಂತರ ಮಾಡಿಕೊಳ್ಳಲು ಎಲ್ಲಾ ಪಿಡಿಓಗಳಿಗೆ ಸೂಚಿಸಿದ್ದೇನೆ. ಗುಣಮಟ್ಟ ಪರಿಶೀಲನೆ ಮಾಡಿಯೇ ಹಸ್ತಾಂತರ ಮಾಡಿಕೊಳ್ಳದಿದ್ದರೆ ಭ್ರಷ್ಟಾಚಾರಕ್ಕೆ ಪರೋಕ್ಷ ಸಹಕಾರ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದರು.

Advertisements

ಉದ್ಯೋಗ ಖಾತ್ರಿ ಯೋಜನೆ ಜಾಬ್ ಕಾರ್ಡ್ ದಾರರ ಮೂಲಕ ಕೆಲಸ ಮಡಿಸಬೇಕಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಸದಸ್ಯರೇ ಕಾಮಗಾರಿ ಮಾಡುತ್ತಿರುವುದು ಓಪನ್ ಸೀಕ್ರೆಟ್ ಆಗಿದೆ. ಪಿಡಿಓ ಕ್ರಮಬದ್ಧತೆ ಪರಿಶೀಲಿಸಿದಾಗ ಸದಸ್ಯರು ಮಧ್ಯೆ ಪ್ರವೇಶಿಸಿ ಇಲ್ಲಸಲ್ಲದ ಆರೋಪ ಮಾಡುವುದು ಎಲ್ಲಡೆ ಕಂಡಿದೆ. ನರೇಗಾ ಯೋಜನೆಯಲ್ಲಿ ಭ್ರಷ್ಟಚಾರ ಬಗ್ಗೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಶಾಸಕ ಜಯಚಂದ್ರ ಅವರು ಪ್ರಸ್ತಾಪ ಮಾಡಿದ್ದರು. ಸಿಇಓ ತನಿಖೆ ನಡೆಸಿದ್ದಾರೆ. ಈ ಯೋಜನೆಯ ಅಭಿವೃದ್ದಿ ಕೆಲಸ ಪೂರೈಸುವುದು ಕಷ್ಟಸಾಧ್ಯ ಎನಿಸಿದೆ ಎಂದ ಅವರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣ ವಿತರಿಸಲಾಯಿತು.

ತಾಪಂ ಇಓ ಶಿವಪ್ರಕಾಶ್, ಕೃಷಿ ಉಪ ನಿರ್ದೇಶಕ ಹುಲಿರಾಜ್, ಸಹಾಯಕ ನಿರ್ದೇಶಕ ಜಗನ್ನಾಥಗೌಡ, ಕೃಷಿ ಅಧಿಕಾರಿ ಪ್ರಕಾಶ್ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X