ಗುಬ್ಬಿ | ಬಗರ್‌ಹುಕುಂ ಸಾಗುವಳಿ ಸಕ್ರಮಗೊಳಿಸಲು ಪ್ರತಿಭಟನೆ : ಪತ್ರ ಚಳುವಳಿ ನಡೆಸಿ ಪ್ರಾಂತ ರೈತ ಸಂಘದಿಂದ ಹಕ್ಕೊತ್ತಾಯ

Date:

Advertisements

ಬಗರ್ ಹುಕುಂ ಸಾಗುವಳಿ ಭೂಮಿಯ ಪಹಣಿಯಲ್ಲಿ ಅರಣ್ಯ ಇಂಡೀಕರಣ ರದ್ದುಪಡಿಸಿ ಸರ್ಕಾರಿ ಕಂದಾಯ ಭೂಮಿಯಾಗಿ ಮರು ಸ್ಥಾಪಿಸಲು ಹಾಗೂ ಸಕ್ರಮ ಕೋರಿ ಸಲ್ಲಿಸಿದ್ದ ಬಡ ರೈತರ ಅರ್ಜಿಯನ್ನ ಮಾನ್ಯ ಮಾಡಿ ಕೂಡಲೇ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ನೂರಾರು ರೈತರು ಗುಬ್ಬಿ ತಾಲೂಕು ಕಚೇರಿ ಮುಂದೆ ಜಮಾಯಿಸಿ ದಿಡೀರ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಮೆರವಣಿಗೆಯಲ್ಲಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಬಗರ್ ಹುಕುಂ ಸಾಗುವಳಿದಾರರ ಹೋರಾಟ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ ನೂರಾರು ರೈತರು ಸಾಗುವಳಿ ಭೂಮಿ ಸಕ್ರಮ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪತ್ರ ಚಳವಳಿಗೆ ಚಾಲನೆ ನೀಡಿದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಮಾತನಾಡಿ, “ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಮಂದಿ ಬಡ ರೈತರ ಬಗರ್ ಹುಕುಂ ಅರ್ಜಿ ಹಾಗೆಯೇ ಸರ್ಕಾರದ ಮುಂದಿದೆ. ಒಂದೂವರೆ ವರ್ಷ ಕಳೆದರೂ ಅಕ್ರಮ ಸಕ್ರಮ ಮಾಡುವ ಮಾತಿಲ್ಲ. ಚುನಾವಣಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲ. ಈ ಹಿಂದೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದೆ ಉಳ್ಳವರಿಗೆ ಭೂಮಿ ಹಂಚಲಾಗಿದೆ. ಈ ಮಧ್ಯೆ ಮಹಾರಾಜರ ನೋಟಿಫಿಕೇಷೆನ್ ಬಗ್ಗೆ ಮಾತನಾಡುತ್ತಿದ್ದಾರೆ. ಹಾಗಾದರೆ ಉಳುವವನೇ ಭೂಮಿಯ ಒಡೆಯ ಕಾನೂನು ಎಲ್ಲಿ ಹೋಯ್ತು. ಅರಣ್ಯದಲ್ಲಿ ಕೃಷಿ ಮಾಡಲು ಬಳಸಿರುವ ಭೂಮಿ ಅನುಭವದಲ್ಲಿರುವ ರೈತರಿಗೆ ವಿತರಣೆ ಮಾಡಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಮೂಲಕ ಸಂದೇಶ ಕೊಡೋಣ” ಎಂದರು.

Advertisements
WhatsApp Image 2024 08 07 at 5.04.35 PM

ಜಿಲ್ಲಾ ಕಾರ್ಯದರ್ಶಿ ಅಜ್ಜಪ್ಪ ಮಾತನಾಡಿ, “ಸಮಿತಿಗೆ ಅತೀ ಹೆಚ್ಚು ಅರ್ಜಿ ತುಮಕೂರು ಜಿಲ್ಲೆಯಲ್ಲಿ ಪೆಂಡಿಂಗ್ ಇದೆ. ನಮ್ಮ ತಾಲೂಕಿನಲ್ಲಿ 60 ಸಾವಿರ ಅರ್ಜಿಗೆ ಉತ್ತರ ಸಿಕ್ಕಿಲ್ಲ. ಅರ್ಹರಿಗೆ ಭೂಮಿ ನೀಡದೆ ಅನುಭವದಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆದಿದೆ. ಚುನಾಯಿತ ಪ್ರತಿನಿಧಿಗಳು ಬಡವರ ಪರ ದನಿ ಎತ್ತಿಲ್ಲ. ಅಮೃತ ಕಾವಲು ಎಂದು ಪ್ರಾಣಿಗಳ ಹೆಸರಿನಲ್ಲಿ ಭೂಮಿ ಉಳಿಸುವ ವೇಗದಲ್ಲಿ ಸತ್ತವನ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ನೀಡುತ್ತಿಲ್ಲ” ಎಂದು ಕಿಡಿಕಾರಿ, “ಕೂಡಲೇ ವಾಸ್ತವದಲ್ಲಿ ಹತ್ತಾರು ವರ್ಷದಿಂದ ಕೃಷಿ ನಡೆಸಿರುವ ಬಡ ರೈತರನ್ನು ಅರ್ಹತೆ ಆಧಾರದ ಮೇಲೆ ಹಕ್ಕುಪತ್ರ ನೀಡಬೇಕು” ಎಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ಸದಸ್ಯರು ತಹಶೀಲ್ದಾರ್ ಬಿ.ಆರತಿ ಅವರಿಗೆ ಮನವಿಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಗುಬ್ಬಿ ತಾಲೂಕು ಅಧ್ಯಕ್ಷ ದೊಡ್ಡನಂಜಯ್ಯ, ತಾಲೂಕು ಕಾರ್ಯದರ್ಶಿ ಬಸವರಾಜು, ಬಗರ್ ಹುಕುಂ ಹೋರಾಟ ಸಮಿತಿಯ ಅಧ್ಯಕ್ಷ ನಾಗರಾಜು, ಮುಖಂಡರಾದ ರಾಜಮ್ಮ, ಎಸ್.ಕೆ.ಕೃಷ್ಣಮೂರ್ತಿ, ರೇಣುಕಮ್ಮ, ಬಸವರಾಜು, ನರಸಿಂಹಮೂರ್ತಿ ಇತರರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X