ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಅಶ್ವತ್ತೇಗೌಡ ಅವಿರೋಧ ಆಯ್ಕೆ

Date:

Advertisements

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್. ಕೊಡಗೀಹಳ್ಳಿ ಪಾಳ್ಯ ಸದಸ್ಯ ಕೆ.ಜಿ.ಅಶ್ವತ್ತೇಗೌಡ ಅವಿರೋಧವಾಗಿ ಆಯ್ಕೆಯಾದರು.

ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರುಪ್ರಸಾದ್ ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೇಮಾ ದಿವಾಕರ್ ನೀಡಿದ ರಾಜೀನಾಮೆ ಹಿನ್ನಲೆ ನಡೆದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಕೆ.ಜಿ.ಅಶ್ವತ್ತೇಗೌಡ ಅವರು ಏಕೈಕ ಅಭ್ಯರ್ಥಿಯಾದ ಕಾರಣ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷ ಕೆ.ಜಿ.ಅಶ್ವತ್ತೇಗೌಡ ಸುದ್ದಿಗಾರರ ಜೊತೆ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಬದ್ದನಾಗಿರುತ್ತೇನೆ. ಸರ್ಕಾರದ ಎಲ್ಲಾ ಕಾರ್ಯಕ್ರಮ ಅನುಷ್ಠಾನವನ್ನು ಎಲ್ಲಾ ಸದಸ್ಯರ ವಿಶ್ವಾಸ ಪಡೆದು ನಡೆಸಿಕೊಂಡು ಮಾದರಿ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆಯಲು ದುಡಿಯುತ್ತೇನೆ. ಬೀದಿ ದೀಪ, ರಸ್ತೆ, ಕುಡಿಯುವ ನೀರು, ಶಾಲೆ ಸೇರಿದಂತೆ ಎಲ್ಲಾ ಸವಲತ್ತು ಒದಗಿಸಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.

Advertisements

ಇದೇ ಸಂದರ್ಭದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಪಂ ಉಪಾಧ್ಯಕ್ಷ ರಂಗರಾಜು, ಸದಸ್ಯರಾದ ಪ್ರೇಮಾ, ಜಯಮ್ಮ, ತಿಮ್ಲಾಚಾರ್, ಗಂಗನರಸಮ್ಮ, ವೆಂಕಟಲಕ್ಷ್ಮಮ್ಮ, ತುಳಸಿದಾಸ್, ಆಂಬುಜಮ್ಮ, ನೀಲಮ್ಮ, ನಾಗರಾಜು, ಸೈಯದ್ ಖಲಂದರ್, ಧನಲಕ್ಷ್ಮಿ, ಮಂಜಮ್ಮ, ರಾಮೇಗೌಡ, ಅನಿತಾ, ಶ್ವೇತಾ, ಶಿವಣ್ಣ, ಭಾರತಿ, ಮಾಜಿ ಅಧ್ಯಕ್ಷ ಕೆ.ಜಿ.ಗಿರೀಶ್, ಮುಖಂಡರಾದ ದಿವಾಕರ್, ಪಾಂಡಣ್ಣ, ರೈತಸಂಘದ ಅಧ್ಯಕ್ಷ ವೆಂಕಟೇಗೌಡ, ಪಡಗುಡಿ ಚಂದ್ರಶೇಖರ್ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X