ಗುಬ್ಬಿ | ಸೆರೆ ಸಿಕ್ಕ ಉಪಟಳ ನೀಡಿದ್ದ ಚಿರತೆ : ಅರಣ್ಯ ಪೊಲೀಸರ ಯಶಸ್ವಿ ಜಂಟಿ ಕಾರ್ಯಾಚರಣೆ

Date:

Advertisements

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಗ್ರಾಮದಲ್ಲಿ ಮೂವರನ್ನು ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬಲೆ ಬೀಸಿ ಯಶಸ್ವಿಯಾಗಿ ಗುರುವಾರ ಸೆರೆ ಹಿಡಿದ್ದಾರೆ.

ಚಿರತೆ ಚಿಕ್ಕಕೆರೆ ಬಾರೆ ತೋಟದ ಸಾಲಿನಲ್ಲಿ ಕಾಣಿಸಿಕೊಂಡು ಸ್ಥಳೀಯ ರೈತರ ಮೇಲೆರಗಿ ಗಾಯಗೊಳಿಸಿತ್ತು. ಈಗಾಗಲೇ ಹಲವು ಕಡೆ ಮನುಷ್ಯರ ಮೇಲೆ ಬೀಳುತ್ತಿದ್ದ ಚಿರತೆ ಬಗ್ಗೆ ಎಚ್ಚೆತ್ತ ಸ್ಥಳೀಯರು ಮಕ್ಕಳು ವೃದ್ಧರ ಮೇಲೆರೆಗುವ ಮುನ್ನ ಸ್ಥಳದಿಂದ ಓಡಿಸುವ ಪ್ರಯತ್ನ ಮಾಡಿ ಮೂವರು ಗಾಯ ಗೊಂಡ ವರದಿ ಪ್ರಕಟವಾಗಿತ್ತು.

ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದ್ದ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತು ಸಿ.ಎಸ್.ಪುರ ಪೊಲೀಸರ ಸಹಕಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು ಎಂಟು ವರ್ಷದ ಚಿರತೆಯನ್ನು ಬಲೆ ಬೀಸಿ ಹಿಡಿದಿದ್ದಾರೆ. ವಲಯ ಅರಣ್ಯಾಧಿಕಾರಿ ಸತೀಶ್ ಚಂದ್ರ ನೇತೃತ್ವದ ತಂಡ 24 ಗಂಟೆಗಳಲ್ಲಿ ಚಿರತೆ ಹಿಡಿದ ಕಾರ್ಯಾಚರಣೆಗೆ ಪ್ರಶಂಸೆ ವ್ಯಕ್ತವಾಗಿದೆ.

Advertisements

ತುರುವೇಕೆರೆ ತಾಲ್ಲೂಕಿನಲ್ಲಿ ಐವರ ಮೇಲೆರಗಿ ಗಾಯ ಮಾಡಿದ್ದ ಚಿರತೆ ಹಾಗೂ ನೇರಳೆ ಕೆರೆಯಲ್ಲಿ ಕುರಿಗಾಯಿ ಮೇಲೆ ಬಿದ್ದ ಚಿರತೆ ಇದೇ ಇರಬಹುದೇ ಎಂಬುದು ಅರಣ್ಯ ಇಲಾಖೆ ಸ್ಪಷ್ಟಪಡಿಸಬೇಕಿದೆ. ನಂತರ ದೂರದ ಅರಣ್ಯ ಪ್ರದೇಶಕ್ಕೆ ಸಾಗಿಸಿ ಬಿಡುವುದಾಗಿ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X