ಗುಬ್ಬಿ | ರಿಸರ್ವ್ ಬ್ಯಾಂಕ್ ಮುಂದೆ ಜ.29 ರಂದು ರೈತರ ಬೃಹತ್ ಪ್ರತಿಭಟನೆ : ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

Date:

Advertisements

ಕೃಷಿ ಕ್ಷೇತ್ರ ಸದೃಢಗೊಳಿಸಲು ನಬಾರ್ಡ್ ಬ್ಯಾಂಕ್ ಸ್ಥಾಪನೆ ಮಾಡಲಾಗಿತ್ತು. ಆದರೆ ಈಚೆಗೆ ಕೇಂದ್ರ ಸರ್ಕಾರ ನಬಾರ್ಡ್ ಬ್ಯಾಂಕ್ ಗೆ ನೀಡುವ ಅನುದಾನದಲ್ಲಿ ಶೇಕಡಾ 58 ರಷ್ಟು ಕಡಿತ ಮಾಡಿದ ಹಿನ್ನಲೆ ರೈತರಿಗೆ ಅನಾನುಕೂಲವಾಗಿದೆ. ಕೂಡಲೇ ರೈತರ ಕೃಷಿ ಕ್ಷೇತ್ರ ನಾಶ ಮಾಡುವ ಹುನ್ನಾರಕ್ಕೆ ತೆರೆ ಎಳೆಯಲು ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಾವಿರಾರು ರೈತರು ಇದೇ ತಿಂಗಳ 29 ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಿಂದ ಸಾಲದ ಮೊತ್ತ ಕಡಿತ ಮಾಡುತ್ತಾ ಬಂದಿದೆ. ಸಹಕಾರಿ ಸಂಘಗಳ ಮೂಲಕ ಕೊಡುವ ಸಾಲ ಸೌಲಭ್ಯ ಸಿಗದೆ ರೈತರು ವಾಣಿಜ್ಯ ಬ್ಯಾಂಕ್ ಮುಂದೆ ಹೆಚ್ಚಿನ ಬಡ್ಡಿಗೆ ಸರದಿಯಲ್ಲಿ ಕಾದು ಕುಳಿತಿದ್ದಾರೆ. ಇಂತಹ ದುಸ್ಥಿತಿಗೆ ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ನೇರ ಕಾರಣ. ಹಂತವಾಗಿ ಕಾರ್ಪೊರೇಟ್ ಕಂಪೆನಿಗೆ ಕೃಷಿ ಕ್ಷೇತ್ರ ಮಾರುವ ಸಂಕಷ್ಟ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

1000943494

ಶೂನ್ಯ ಬಡ್ಡಿ ದರ ಸಾಲ ನೀಡುವ ನಬಾರ್ಡ್ ಬ್ಯಾಂಕ್ ರೈತರಿಗೆ ಕೃಷಿ ಚಟುವಟಿಕೆಗೆ ಹತ್ತಿರವಾಗಿತ್ತು. ಅನುದಾನ ಕಡಿತದಿಂದ ವಾಣಿಜ್ಯ ಬ್ಯಾಂಕ್ ಜೊತೆಗೆ ಮೈಕ್ರೋ ಫೈನಾನ್ಸ್ ಬಳಿ ಸಾಲ ಪಡೆದ ರೈತ ಕುಟುಂಬ ಬೀದಿಗೆ ಬಂದಿದೆ. ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಾಲದ ಶೂಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೇಕಡಾ 20 ರಿಂದ 25 ರವರೆಗೆ ಬಡ್ಡಿ ವಿಧಿಸುವ ಮೈಕ್ರೋ ಫೈನಾನ್ಸ್ ಗೊಂಡಾ ವರ್ತನೆಯಲ್ಲಿ ಸಾಲ ವಸೂಲಿ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದ ಅವರು ರೈತರ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಯಂತೆ ಬೇಡಿಕೆ ಈಡೇರಿಸಬೇಕು. ಸಾಲ ಮನ್ನಾ, ವಿದ್ಯುತ್ ಮೀಟರ್ ಅಳವಡಿಕೆ ರದ್ದು, ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Advertisements

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ನಬಾರ್ಡ್ ಉಳಿವು ರೈತರ ಉಳಿವು ಹಾಗೂ ಸಹಕಾರಿ ಸಂಘಗಳ ಉಳಿವು ಎಂಬ ಅಂಶ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಕಳೆದ ವರ್ಷ ನಬಾರ್ಡ್ ರಾಜ್ಯಕ್ಕೆ 5600 ಕೋಟಿ ರೂಗಳನ್ನು ನೀಡಿತ್ತು. ಈ ಬಾರಿ 2340 ಕೋಟಿ ರೂಗಳನ್ನು ನೀಡಿದೆ. ಇದರಿಂದ ಶೂನ್ಯ ಬಡ್ಡಿಯ 5 ಲಕ್ಷ ಸಾಲಕ್ಕೆ ಕುತ್ತು ಬಂದಿದೆ. ಇದರಿಂದ ರಾಜ್ಯದ 30 ಲಕ್ಷ ರೈತರಿಗೆ ಅನ್ಯಾಯ ಆಗಲಿದೆ. ಸಾಲದ ಸುಳಿಗೆ ಸಿಲುಕಿ ರೈತರ ಸರಣಿ ಆತ್ಮಹತ್ಯೆ ನಡೆಯಲಿದೆ. ಈ ಎಲ್ಲಾ ಅಂಶಗಳನ್ನು ಒಳಗೊಂಡ ಪ್ರತಿಭಟನೆ ರಿಸರ್ವ್ ಬ್ಯಾಂಕ್ ಮುಂದೆ ಸಾವಿರಾರು ರೈತರು ನಡೆಸಲಿದ್ದಾರೆ. ಗುಬ್ಬಿ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಹಕ್ಕು ಪ್ರತಿಪಾದಿಸೋಣ ಎಂದು ಕರೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಯುವ ಘಕಟದ ಶಿವಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಸಿ.ಟಿ.ಕುಮಾರ್, ಸತ್ತಿಗಪ್ಪ, ಕುಮಾರಸ್ವಾಮಿ, ಯತೀಶ್ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X