ಗುಬ್ಬಿ | ರೈತ ಹೋರಾಟಕ್ಕೆ ಬಲ ತುಂಬಲು ಸದಸ್ಯತ್ವ ನೋಂದಣಿ ಫೆ.13 ರಿಂದ ಆರಂಭ : ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

Date:

Advertisements

 ಕಳೆದ 40 ವರ್ಷದಿಂದ ನಿರಂತರ ರೈತ ಪರ ಹೋರಾಟ ನಡೆಸಿದ ರೈತ ಸಂಘವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈತ ಸಂಘದ ಸಂಸ್ಥಾಪಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮ ದಿನವಾದ ಫೆ.13 ರಿಂದ ರೈತ ಸಂಘದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಆರಂಭಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಗುಬ್ಬಿ ಪಟ್ಟಣದ ಬಾಬು ಜಗಜೀವನರಾಂ ಭವನದಲ್ಲಿ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು ಗುಬ್ಬಿ ತಾಲ್ಲೂಕಿನಲ್ಲಿ ಕನಿಷ್ಠ 2 ಸಾವಿರ ಮಂದಿ ರೈತರನ್ನು ನೋಂದಣಿ ಮಾಡಿಸಲಾಗುವುದು. ಇದೇ ತಿಂಗಳ 15 ರಂದು ಕಸಬ ಹೋಬಳಿ, 16 ರಂದು ಚೇಳೂರು, 18 ರಂದು ಕಡಬ, ಸಿ.ಎಸ್.ಪುರ, 19 ರಂದು ನಿಟ್ಟೂರು, 21 ರಂದು ಹಾಗಲವಾಡಿ ಹೀಗೆ ಅಭಿಯಾನ ನಡೆಯಲಿದೆ ಎಂದು ವಿವರಿಸಿದರು.

ರಾಜ್ಯದ 26826 ಹಳ್ಳಿಗಳಲ್ಲಿ ರೈತ ಸಂಘ ಕೆಲಸ ಮಾಡುತ್ತಿದೆ. ಮತ್ತಷ್ಟು ಶಕ್ತಿಯುತವಾಗಿ ಸಂಘ ಬೆಳೆಸಿ ನಮ್ಮ ಹಕ್ಕು ಪ್ರತಿಪಾದಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮ ದಿನದಂದು ಮೈಸೂರಿನಲ್ಲಿ ರೈತ ಸಮಾವೇಶ ನಡೆಸಿ ನಮ್ಮ ಹಕ್ಕು ಪ್ರತಿಪಾದಿಸುವ ಕಾರ್ಯಗಾರ ನಡೆಸಲಾಗುವುದು ಎಂದ ಅವರು ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಕದ್ದುಮುಚ್ಚಿ ನಡೆಸುವ ಕೆಲಸ ಸರ್ಕಾರ ಮಾಡುತ್ತಿದೆ. ಈಗಾಗಲೇ ಸರ್ಕಾರಿ ಜಾಗದಲ್ಲಿ ಕೆಲಸ ನಡೆಸಿದ್ದಾರೆ. ಆದರೆ ರೈತರು ಜಮೀನು ಬಿಟ್ಟಿಲ್ಲ. ಈ ಹೋರಾಟಕ್ಕೆ ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರು ದನಿಯಾಗಿ ನಿಂತು ರೈತಪರ ಮಾತನಾಡಿ ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

Advertisements

ವಿದ್ಯುತ್ ಕಣ್ಣಾಮುಚ್ಚಾಲೆ ಈಗಲೇ ಬೇಸಿಗೆಗೆ ಮುನ್ನ ಶುರುವಾಗಿದೆ. ರೈತರಿಗೆ ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲ. ಕನಿಷ್ಠ 7 ಗಂಟೆ ನೀಡಬೇಕಾದ ಕರೆಂಟ್ ನೀಡದೆ ರೈತರಿಗೆ ತೊಂದರೆ ನೀಡಿದ್ದಾರೆ. ತ್ರೀ ಫೇಸ್ ಕರೆಂಟ್ ನೀಡುವಲ್ಲಿ ವಿಫಲವಾದ ಸರ್ಕಾರ ತೋಟದ ಮನೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಸಮರ್ಪಕ ವಿದ್ಯುತ್ ಸರಬರಾಜು, ನಿಗದಿತ ಸಮಯದಲ್ಲಿ ಕರೆಂಟ್ ನೀಡುವಂತೆ ಆಗ್ರಹಿಸಿ ಗುಬ್ಬಿ ಬೆಸ್ಕಾಂ ಕಚೇರಿ ಮುಂದೆ ಇದೇ ತಿಂಗಳ 24 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಜಮೀನು ನೀಡದೆ ಅರ್ಜಿ ಹಾಕಿ ಕಾದು ಕುಳಿತ ರೈತರಿಗೆ ಶಾಕ್ ನೀಡಿದ ಸರ್ಕಾರ ಶೇಕಡಾ 75 ರಷ್ಟು ಅರ್ಜಿಗಳನ್ನು ವಜಾಗೊಳಿಸಿದೆ. ಇದು ಅನುಭವದಲ್ಲಿರುವ ರೈತರಿಗೆ ಅನ್ಯಾಯ ಆಗಿದೆ. ಸ್ವಾಧೀನ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಸರಿಯಲ್ಲ ಎಂದು ಎಚ್ಚರಿಸಿದ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಆರು ಲಕ್ಷ ಕೋಟಿ ರೈತರ ಸಾಲ ಮನ್ನಕ್ಕೆ ಆಗ್ರಹಿಸಿದರೆ ಕಾರ್ಪೊರೇಟರ್ ಕಂಪೆನಿಯ ಅರವತ್ತು ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ. ಈ ಜೊತೆಗೆ ರೈತರ ಕೊಳವೆಬಾವಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಕೆ ಮಾಡಲು ಮುಂದಾಗಿರುವುದು ಸರಿಯಲ್ಲ. ಈ ಸಂಕಟದಿಂದ 26 ನಿಮಿಷಕ್ಕೆ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಯುವ ಘಟಕ ಅಧ್ಯಕ್ಷ ಜಗದೀಶ್, ಮುಖಂಡರಾದ ಯತೀಶ್, ಕೃಷ್ಣಯ್ಯ ಶೆಟ್ಟಿ, ರವೀಶ್, ಮಹದೇವಯ್ಯ, ಸಿ.ಟಿ.ಕುಮಾರ್, ಮಂಜುನಾಥ್, ಗುರುಚನ್ನಬಸವಯ್ಯ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X