ಗುಬ್ಬಿ | ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಪಂಚಾಯಿತಿ ಜೊತೆ ಸಮುದಾಯಗಳ ಸಾಥ್ : ಎಸ್.ಶಿವಪ್ರಕಾಶ್

Date:

Advertisements

 ಗುಬ್ಬಿ ತಾಲೂಕಿನ ಎಲ್ಲಾ 34 ಗ್ರಾಮ ಪಂಚಾಯಿತಿಗಳಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ:02 ರವರೆಗೆ ನಡೆದಿರುವ ಸ್ವಚ್ಛತೆಯ ಸೇವೆ -2025 ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿಗಳ ಮುಖ್ಯ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳ, ಬ್ಲಾಕ್ ಸ್ಪಾಟ್ ಗಳು, ಕೆರೆಕಟ್ಟೆ, ಕಲ್ಯಾಣಿ, ನೀರಿನ ಟ್ಯಾಂಕ್ ಹಾಗೂ ದನಗಳು ಕುಡಿಯುವ ನೀರಿನ ತೊಟ್ಟಿಗಳ ಸಹಿತ ಎಲ್ಲವನ್ನೂ ಸ್ವಚ್ಚಗೊಳಿಸುವ ದಿಟ್ಟ ಹೆಜ್ಜೆ ಇಟ್ಟ ಪಂಚಾಯಿತಿ ಕೆಲಸಕ್ಕೆ ಶಾಲಾ ಕಾಲೇಜಿನ ಎನ್ಎನ್ಎಸ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಸಾಥ್ ನೀಡಲಿದೆ ಎಂದು ತಾಪಂ ಇಒ ಎಸ್.ಶಿವಪ್ರಕಾಶ್ ತಿಳಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯರಸ್ತೆ ಬದಿ ಕಸ ತೆಗೆಯುವುದು, ಶಾಲೆ ಹಾಗೂ ಸಾರ್ವಜನಿಕ ಆಸ್ಪತ್ರೆ ಆವರಣ ಮತ್ತು ಅಂಗನವಾಡಿ ಕೇಂದ್ರ, ದೇವಸ್ಥಾನ ಆವರಣ ಕ್ಲೀನ್ ಮಾಡಲು ಸಮುದಾಯ ಸಹಾಯ ಪಡೆಯಲಾಗಿದೆ ಎಂದರು.

ಸ್ವಚ್ಛತೆ ಅರಿವು ಮೂಡಿಸುವ ಜೊತೆಗೆ ಸ್ವಚ್ಚ ಕಾರ್ಯಕ್ಕೆ ಸಾರ್ವಜನಿಕರನ್ನು ಸಹಯೋಗ ಪಡೆದಲ್ಲಿ ಜವಾಬ್ದಾರಿ ಹೆಚ್ಚಿಸಿಕೊಳ್ಳುವ ಜನರು ನಮ್ಮ ಊರಿನ ಸ್ವಚ್ಛತೆ ಬಗ್ಗೆ ವಿಶೇಷ ಕಾಳಜಿ ತೋರುತ್ತಾರೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕ, ಸರ್ಕಾರಿ ಕಚೇರಿ, ಗ್ರಾಮ ಪಂಚಾಯತಿ ಪಂಪ್ ಹೌಸ್, ಐತಿಹಾಸಿಕ ಸ್ಥಳಗಳು, ಪುರಾತನ ಸ್ಥಳಗಳು, ಸಂತೆ ಮೈದಾನ ಹೀಗೆ ಅನೇಕ ಸ್ಥಳಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳ ಭಾಗವಹಿಸುವಿಕೆ ಇರುತ್ತದೆ ಎಂದರು.

 ಸ್ವಸಹಾಯ ಸಂಘಗಳ ಮಹಿಳೆಯರು, ವಿದ್ಯಾರ್ಥಿಗಳು, ಆಸಕ್ತ ಸಾಮಾಜಿಕ ಕಳಕಳಿಯ ಯುವಕರನ್ನು ಬಳಸಿ ಅಂಗಡಿ, ಹೋಟೆಲ್, ಬೇಕರಿ ಇನ್ನು ಮುಂತಾದ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಇಂತಹ ಸೇವಾ ಕಾರ್ಯದಲ್ಲಿ ಜನರು ಭಾಗವಹಿಸಿ ಇಡೀ ತಾಲ್ಲೂಕಿನ ಆರೋಗ್ಯ ಕಾಪಾಡೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X