ಗುಬ್ಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಹಲವು ಪ್ರಕರಣದಲ್ಲಿ ಬೇಕಿದ್ದ ಅಂತರ ಜಿಲ್ಲಾ ಕಳ್ಳರಿಬ್ಬರ ಬಂಧನ

Date:

ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಘಟನೆ ಕೆಲ ತಿಂಗಳ ಹಿಂದೆ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ನಡೆದಿತ್ತು. ಈ ಪ್ರಕರಣದ ಬೆನ್ನು ಹತ್ತಿದ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓಜಿಕುಪ್ಪಂ ಗ್ಯಾಂಗ್ ನ ಇಬ್ಬರು ಕುಖ್ಯಾತಿ ಕಳ್ಳರನ್ನು ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಆಂಧ್ರ ಮೂಲದ ಶಿವ(44) ಹಾಗೂ ಸುಬ್ರಹ್ಮಣ್ಯ ಅಲಿಯಾಸ್ ಮಣಿ (38) ಬಂಧಿತ ಆರೋಪಿಗಳು. ಗುಬ್ಬಿ ಪ್ರಕರಣದಲ್ಲಿ ಪತ್ತೆಯಾದ ಸುಮಾರು 13.60 ಲಕ್ಷ ನಗದು ಹಣ ಮತ್ತು ಇತರೆ ಪ್ರಕರಣದ ಒಂದು ಚಿನ್ನದ ಬ್ರಾಸ್ಲೈಟ್ ಸೇರಿ ಒಟ್ಟು ಮೌಲ್ಯ 16 ಲಕ್ಷ ರೂಗಳನ್ನು ಲಪಟಾಯಿಸಿದ ಆರೋಪಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಶಿವರಾಜು ಎಂಬ ವರ್ತಕ ನಿಟ್ಟೂರು ಬ್ಯಾಂಕ್ ಖಾತೆಯಿಂದ 15 ಲಕ್ಷ ನಗದು ಹಣವನ್ನು ಡ್ರಾ ಮಾಡಿಕೊಂಡು ತನ್ನ ಕಾರಿನಲ್ಲಿ ಇಟ್ಟುಕೊಂಡು ಗುಬ್ಬಿ ಎಪಿಎಂಸಿ ಯಾರ್ಡ್ ನಲ್ಲಿರುವ ಎಪಿಎಂಸಿ ಕಚೇರಿಯ ಮುಂಭಾಗ ಕಾರನ್ನು ನಿಲ್ಲಿಸಿ, 15 ಲಕ್ಷ ನಗದು ಹಣ ಹಾಗೂ ಇತರೆ ದಾಖಲಾತಿಗಳನ್ನು ಬಿಟ್ಟು ಕಚೇರಿಗಳಿಗೆ ಹೋಗಿ ವಾಪಸ್ ಬರುವುದರೊಳಗೆ 15 ಲಕ್ಷ ನಗದು ಹಣ ಕಿಟಿಕಿ ಗ್ಲಾಸ್ ಒಡೆದು ಕಳವು ಮಾಡಿರುತ್ತಾರೆ.

ಪ್ರಕರಣ ಕೈಗೆತ್ತಿಕೊಂಡ ಶಿರಾ ಉಪ ವಿಭಾಗದ ಡಿವೈಎಸ್ಪಿ ಶೇಖರ್ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತ ನಿರೀಕ್ಷಕರಾದ ರಾಘವೇಂದ್ರ ಅವರ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂದಿಸಿದ್ದಾರೆ.

ಈ ಆರೋಪಿತರು ಅಂತರ್ ಜಿಲ್ಲಾ ರಾಜ್ಯ ಅಪರಾಧಿಗಳಾಗಿದ್ದು ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಾದ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ , ಸಿರಾ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದು ಈ ಎಲ್ಲಾ ಐದು ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ನಗದು ಹಣ ಹಾಗೂ ಒಂದು ಚಿನ್ನದ ಬ್ರಾಸ್ಲೈಟ್ ಸೇರಿ ಒಟ್ಟು 16 ಲಕ್ಷ ಮೌಲ್ಯದ ಸ್ವತ್ತನ್ನು ಅಮಾನತು ಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿತರಾದ ಅಂಕಯ್ಯ, ಕಿರಣ್ ಮತ್ತು ರಾಜಶೇಖರಯ್ಯ ತಲೆಮೆರೆಸಿಕೊಂಡಿದ್ದು ಇವರ ಪತ್ತೆ ಕಾರ್ಯ ಮುಂದುವರಿಸಲಾಗಿದೆ. ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಗೆ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವೆಂಕಟ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...