ಗುಬ್ಬಿ | ಒಳ ಮೀಸಲಾತಿ ಕುರಿತ ಜನಗಣತಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಿ : ತಹಶೀಲ್ದಾರ್ ಮನವಿ

Date:

Advertisements

ಒಳಮೀಸಲಾತಿ ಹಿನ್ನಲೆ ಸರಿಯಾದ ದತ್ತಾಂಶ ಸಂಗ್ರಹಕ್ಕೆ ಜನಗಣತಿ ಆರಂಭವಾಗಿದ್ದು ಸಾರ್ವಜನಿಕರು ಸಹಕರಿಸಿ ಗಣತಿದಾರರಿಗೆ ಸೂಕ್ತ ದಾಖಲೆ ಜೊತೆಗೆ ಸಮರ್ಪಕ ಮಾಹಿತಿ ನೀಡಿ ಗಣತಿ ಯಶಸ್ವಿಗೆ ಸಹಕರಿಸಿ ಎಂದು ತಹಶೀಲ್ದಾರ್ ಆರತಿ.ಬಿ ಮನವಿ ಮಾಡಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಗಣತಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಮೊಬೈಲ್ ಮೂಲಕ 42 ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿ ಮುಖ್ಯ ಜಾತಿ ಹಾಗೂ ಮೂಲ ಜಾತಿ ಹೆಸರನ್ನು ಯಾವುದೇ ಮುಜುಗರ ಇಲ್ಲದೆ ನಮೂದಿಸಿ ವಿವರಣೆ ನೀಡುವಂತೆ ತಾಲ್ಲೂಕಿನ ಜನರಲ್ಲಿ ಮನವಿ ಮಾಡಿದರು.

1001402044

ಗುಬ್ಬಿ ವಿಧಾನಸಭಾ ಕ್ಷೇತ್ರದ 198 ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ 48 ಮತಗಟ್ಟೆ ಸೇರಿದಂತೆ ತಾಲ್ಲೂಕಿನ 246 ಮತಗಟ್ಟೆಯ ವ್ಯಾಪ್ತಿಯಲ್ಲಿ ಗಣತಿ ಆರಂಭಿಸಲಾಗಿದೆ. ಈ ಕಾರ್ಯಕ್ಕೆ 297 ಗಣತಿದಾರರು ಹಾಗೂ 27 ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಜೊತೆಗೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಸಹ ಸದಸ್ಯರಾಗಿ ತಹಶೀಲ್ದಾರ್, ತಾಪಂ ಇಓ, ಬಿಇಓ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿದ್ದಾರೆ ಎಂದರು.

Advertisements

ಇದೇ ತಿಂಗಳ 17 ರವರೆಗೆ ಬೆಳಿಗ್ಗೆ 6.30 ರಿಂದ ಸಂಜೆ 6.30 ರವರೆಗೆ ನಿರಂತರ ನಡೆಯುವ ಗಣತಿಗೆ ಸಾಕಷ್ಟು ಸಮಯ ಬೇಕಿದೆ. ಒಂದು ಕುಟುಂಬ ಸದಸ್ಯರ ಎಲ್ಲಾ ಮಾಹಿತಿ ಅವಶ್ಯವಿರುವ ಕಾರಣ ಸಮಯ ಬೇಕಿದೆ. ಮೇ 18 ರಿಂದ 21 ರವರೆಗೆ ಆಯಾ ಮತಗಟ್ಟೆಯಲ್ಲಿ ಬಿಟ್ಟು ಹೋದ ಸದಸ್ಯರ ಮಾಹಿತಿ ನೋಂದಾಯಿಸಲು ಅವಕಾಶ ನೀಡಲಾಗಿದೆ. 18 ರಿಂದ 23 ರವರೆಗೆ ಆನ್ ಲೈನ್ ಮೂಲಕ ಸಹ ತಮ್ಮ ಮಾಹಿತಿ ರವಾನಿಸಿ ಗಣತಿಗೆ ಸೇರಿಸಬಹುದಾಗಿದೆ ಎಂದು ತಿಳಿಸಿದ ಅವರು ಗಣತಿದಾರರ ಸಮಯ ಅತ್ಯಮೂಲ್ಯವಾದ ಕಾರಣ ಎಲ್ಲಾ ದಲಿತ ಬಂಧುಗಳು ತನ್ನ ದಾಖಲೆ, ಮಾಹಿತಿಯನ್ನು ಬೇಗನೇ ನೀಡಿ ಸಹಕರಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಪಂ ಇಓ ಶಿವಪ್ರಕಾಶ್, ಬಿಇಓ ನಟರಾಜ್, ಎಸಿಡಿಪಿಓ ಕೃಷ್ಣಮೂರ್ತಿ, ಬಿಆರ್ ಸಿ ಮಧುಸೂದನ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X