ಗುಬ್ಬಿ | ಪುಂಡರ ಹಾವಳಿ : ಆತಂಕಕ್ಕೆ ಒಳಗಾದ ನಾಗರಿಕರು

Date:

Advertisements

ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗುವ ಜೊತೆಗೆ ಗುಬ್ಬಿ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಪೆಟ್ರೋಲ್ ಬಂಕ್ ಗೆ ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪು ಕುಡಿದ ಅಮಲಿನಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟ್ ಸೇದುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದ ಬಂಕ್ ಸಿಬ್ಬಂದಿ ಇಲ್ಲಿ ಸಿಗರೇಟ್ ಸೇದುವಂತಿಲ್ಲ ಎಂದಿದ್ದಕ್ಕೆ ಏಕಾಏಕಿ ದೊಣ್ಣೆ, ಕಬ್ಬಿಣದ ಬಕೆಟ್, ಚೇರ್ ತೆಗೆದುಕೊಂಡು ಬಂಕ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪಟ್ಟಣದಲ್ಲಿ ಹಲವು ಬಡಾವಣೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ 12 ರವರೆಗೆ ಗುಂಪುಗೂಡಿ ದಾಂಧಲೆ ಮಾಡುವ ಘಟನೆ ಕೆಲ ಬಡಾವಣೆಯಲ್ಲಿ ನಡೆದಿದೆ. ಅಹಿತಕರ ಘಟನೆಗಳು ಹೆಚ್ಚಾಗುವ ಮುನ್ನ ಪೊಲೀಸ್ ಇಲಾಖೆ ಎಚ್ಚೆತ್ತು ಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣದಲ್ಲಿ ರಾತ್ರಿ ನಡೆದ ಪೆಟ್ರೋಲ್ ಬಂಕ್ ಗಲಭೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಇಲ್ಲಿಯವರೆಗೂ ಗುಬ್ಬಿ ಪೊಲೀಸರಿಂದ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X