ಗುಬ್ಬಿ | ಕೆಆರ್ ಎಸ್ ಪಕ್ಷದ ಪ್ರತಿಭಟನೆಗೆ ಕಂದಾಯ ನೌಕರರ ವಿರೋಧ

Date:

Advertisements

ತುಮಕೂರು ಜಿಲ್ಲಾಧಿಕಾರಿಗಳಿಗೆ ಭ್ರಷ್ಟಚಾರ ಹೆಸರಿನಲ್ಲಿ ಅಪಮಾನ ಮಾಡಿರುವ ಕೆಆರ್ ಎಸ್ ಪಕ್ಷ ವರ್ತನೆ ಖಂಡನೀಯ. ಜಿಲ್ಲಾಧಿಕಾರಿಗಳ ಪರವಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಘೋಷಣೆ ಹಾಕಿ ಸರ್ಕಾರಿ ನೌಕರರ ಸಂಘ, ಕಂದಾಯ ನೌಕರರ ಸಂಘ, ಗ್ರಾಮ ಆಡಳಿತಾಧಿಕಾರಿಗಳ ಸಂಘ, ಭೂ ಮಾಪಕರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ತಹಶೀಲ್ದಾರ್ ಆರತಿ.ಬಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್ ಯಾವುದೇ ಸಾಕ್ಷ್ಯಾಧಾರ ಇಲ್ಲದ ಆರೋಪ ಮಾಡಿದ್ದಲ್ಲದೆ ಉನ್ನತ ಅಧಿಕಾರಿಗಳಿಗೆ ಶಾಲು ಪೇಟೆ ರೇಷ್ಮೆ ಸೀರೆ ನೀಡಿ ನಾಗರೀಕ ಸನ್ಮಾನ ಮಾಡುವುದಾಗಿ ಹೇಳಿರುವ ಪಕ್ಷ ಸಣ್ಣ ನೌಕರರನ್ನು ಬಿಡುವುದಿಲ್ಲ. ಮಾನಸಿಕ ಹಿಂಸೆ ನೀಡಲು ಎಲ್ಲಾ ರೀತಿಯಲ್ಲಿ ಮುಂದಾಗುತ್ತಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ತೀವ್ರ ಹಿಂಸೆ ಇತ್ತೀಚಿಗೆ ಹೆಚ್ಚಾಗಿದೆ. ಆರ್ ಟಿಐ ಕಾರ್ಯಕರ್ತರ ಹೆಸರಿನಲ್ಲಿ ಸಹ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಸರ್ಕಾರಿ ನೌಕರರನ್ನು ಉಳಿಸಿ ಕೆಲಸ ಮಾಡಲು ಅನುವು ಮಾಡಬೇಕು ಎಂದು ಮನವಿ ಮಾಡಿದರು.

ಕಂದಾಯ ನೌಕರರ ಸಂಘದ ಅಧ್ಯಕ್ಷ ಮೋಹನ್ ಮಾತನಾಡಿ ಮಹಿಳಾ ಸಿಬ್ಬಂದಿಗಳ ಕೆಲಸಕ್ಕೆ ಅಡ್ಡಿ ಪಡಿಸಿ ವಿಡಿಯೋ ಹಿಡಿದು ಫೇಸ್ ಬುಕ್ ಮೂಲಕ ನೇರ ಪ್ರಸಾರ ಮಾಡುವುದು ಸರಿಯಲ್ಲ. ರಾಜ್ಯದ ಹಲವು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿಗಳ ಮೇಲೆ ಇಲ್ಲಸಲ್ಲದ ದೂರು ಹೇಳಿ ವಿಡಿಯೋ ಮಾಡುವುದು ಮಾನಸಿಕ ಹಿಂಸೆ ಆಗಿದೆ ಎಂದು ಮೌಖಿಕ ದೂರು ಈಗಾಗಲೇ ಬಂದಿವೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈಗ ಜಿಲ್ಲೆಯ ದಂಡಾಧಿಕಾರಿ ಮೇಲೆ ಆರೋಪ ಮಾಡುತ್ತಿರುವುದು ತೀವ್ರ ಆಘಾತ ತಂದಿದೆ. ಮುಂದಿನ ದಿನದಲ್ಲಿ ಬಿ ಮತ್ತು ಸಿ ದರ್ಜೆ ನೌಕರರ ಗತಿ ಹೇಗೆ ಎಂಬ ಆಂತಕ ಎಲ್ಲರಲ್ಲೂ ಮನೆ ಮಾಡಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

Advertisements

ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಸುಮತಿ ಮಾತನಾಡಿ ಸಾರ್ವಜನಿಕ ಕೆಲಸ ಮಾಡುವ ಸರ್ಕಾರಿ ನೌಕರರನ್ನು ಸಾರ್ವಜನಿಕವಾಗಿಯೇ ಅಪಮಾನಿಸುವುದು ಎಷ್ಟು ಸರಿ. ಕಾನೂನು ಬದ್ಧ ಕೆಲಸ ಮಾಡುವಾಗ ಕೆಲ ನಿಷ್ಠುರ ಸನ್ನಿವೇಶ ಎದುರಾಗುತ್ತವೆ. ಈ ಸಮಯ ಭ್ರಷ್ಟಚಾರ ಆರೋಪ ಮಾಡುವುದು ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಭೂ ಮಾಪಕರ ಸಂಘದ ಅಧ್ಯಕ್ಷ ನಿಜಗುಣಪ್ಪ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಸೇರಿದಂತೆ ಎಲ್ಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಕಪ್ಪು ಪಟ್ಟಿ ಧರಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X