ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

Date:

Advertisements

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಎನ್.ಕೋಟೆ 3 ವಾರ್ಡ್ ಸದಸ್ಯರಾದ ಸಿದ್ದಗಂಗಮ್ಮ ಕಲ್ಲೇಶ್ ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಆರತಿ.ಬಿ ನಡೆಸಿಕೊಟ್ಟರು. ಎಸ್ಸಿ ಮಹಿಳೆ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಭಾಗ್ಯಮ್ಮ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಿದ್ಧಗಂಗಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಉಪಾಧ್ಯಕ್ಷೆ ಸಿದ್ದಗಂಗಮ್ಮ ಮಾತನಾಡಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಶಾಸಕ ವಾಸಣ್ಣ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

Advertisements

ಎಂ.ಎನ್.ಕೋಟೆ ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿಸುವ ಕೆಲಸ ಎಲ್ಲಾ ಸದಸ್ಯರ ಜೊತೆ ಸೇರಿ ನಡೆಸುತ್ತೇವೆ. ಅಭಿವೃದ್ದಿ ಕೆಲಸಗಳಿಗೆ ಪಕ್ಷಾತೀತ ನಿಲುವು ತಾಳಿ ಎಲ್ಲಾ ಜನ ಪ್ರತಿನಿಧಿಗಳ ಭೇಟಿ ಮಾಡಿ ಸವಲತ್ತು ತರುವ ಕೆಲಸ ಮಾಡುತ್ತೇವೆ. ಸದಸ್ಯರ ಜೊತೆ ಅಭಿವೃದ್ದಿ ಪಡಿಸಲು ಉಳಿದ ನಾಲ್ಕೈದು ತಿಂಗಳು ನಿರಂತರ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಅಧ್ಯಕ್ಷ ನರಸಯ್ಯ, ಸದಸ್ಯರಾದ ದಿಲೀಪ್, ರವೀಶ್, ಉಮಾ, ದಲಿತ ಮುಖಂಡರಾದ ಜಗನ್ನಾಥ್, ಈಶ್ವರಯ್ಯ, ಕಡಬ ಶಂಕರ್, ಕಲ್ಲೂರು ರವಿಕುಮಾರ್, ಕುಂದರನಹಳ್ಳಿ ನಟರಾಜ್, ಹೊಸಹಳ್ಳಿ ಮಹೇಶ್, ಗ್ಯಾರಹಳ್ಳಿ ಯೋಗೀಶ್, ಬಸವರಾಜ್, ನಾಗಭೂಷಣ್, ಪಿಡಿಓ ಕೃಷ್ಣಮೂರ್ತಿ ಇತರರು ಅಭಿನಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X