ಗುಬ್ಬಿ | ಸ್ಥಳೀಯ ಪಪಂ ಆಯೋಜಿಸಿದ ಪೌರ ಕಾರ್ಮಿಕರ ಕ್ರೀಡಾಕೂಟ

Date:

Advertisements

ಹಗ್ಗಜಗ್ಗಾಟ, ಗುಂಡು ಎಸೆತ, ಮಡಿಕೆ ಹೊಡೆಯುವುದು, ನಿಂಬೆ ಚಮಚ ಓಟ, ಮ್ಯೂಸಿಕಲ್ ಚೇರ್ ಹೀಗೆ ಅನೇಕ ಕ್ರೀಡೆಗಳ ಆಟವಾಡಿದ ಪೌರ ಕಾರ್ಮಿಕರು ನಿತ್ಯದ ಜಂಜಾಟದಿಂದ ಹೊರತಾದ ಮನರಂಜನೆ ಅನುಭಿಸಲು ಸ್ಥಳೀಯ ಪಟ್ಟಣ ಪಂಚಾಯಿತಿ ಎಲ್ಲಾ ಪೌರ ಸಿಬ್ಬಂದಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ಕ್ರೀಡಾಕೂಟವನ್ನು ಉದ್ಘಾಟಿಸಿದ ಪಪಂ ಅಧ್ಯಕ್ಷೆ ಮಂಗಳಮ್ಮ ಹಾಗೂ ಉಪಾಧ್ಯಕ್ಷೆ ಮಮತಾ ಪಟ್ಟಣ ಸ್ವಚ್ಚತೆ ಬಗ್ಗೆ ನಿತ್ಯ ತಮ್ಮನ್ನೇ ತೊಡಗಿಸಿಕೊಂಡ ಕಾರ್ಮಿಕರು ಪೌರ ಕಾರ್ಮಿಕರ ದಿನಾಚರಣೆಯನ್ನು ಸಂತೋಷದಿಂದ ಆಚರಣೆ ಮಾಡಲು ಈ ವಿಶೇಷ ಕ್ರೀಡಾಕೂಟ ಆಯೋಜಿಸಲಾಗಿದೆ. ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಆಟಗಳನ್ನು ಸ್ಥಳೀಯ ಶ್ರೀ ಚನ್ನಬಸವೇಶ್ವರ ಯುವಕ ಸಂಘ ಅಚ್ಚುಕಟ್ಟಾಗಿ ನಿರ್ವಹಿಸಿತು.

ಕ್ರೀಡಾಕೂಟಕ್ಕೆ ಶುಭ ಕೋರಿದ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಸಿ.ಕೃಷ್ಣಮೂರ್ತಿ, ಆನಂದ್ ಎಲ್ಲಾ ಆಟದಲ್ಲೂ ತಮ್ಮನ್ನು ತೊಡಗಿಸಿಕೊಂಡು ಪೌರ ಕಾರ್ಮಿಕರ ಜೊತೆ ಸಂತಸ ಹಂಚಿಕೊಂಡರು. ಕ್ರೀಡಾ ಮನೋಭಾವ, ಸ್ಫೂರ್ತಿ ತುಂಬಿ ಕ್ರೀಡೆಯಲ್ಲಿ ತೊಡಗುವ ಜೊತೆಗೆ ಕಾರ್ಮಿಕರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ ಎಂದು ತಿಳಿಸಿದರು.

Advertisements

ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ, ಸಿಬ್ಬಂದಿಗಳಾದ ಲೋಕನಾಥ್, ಪ್ರೀತಂ, ಆಂತರಾಜು, ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಕಾರ್ಯದರ್ಶಿ ಸಿ.ಆರ್. ಶಂಕರ್ ಕುಮಾರ್, ದೈಹಿಕ ಶಿಕ್ಷಕ ಗಿರೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X