ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೆರಾಯಸ್ವಾಮಿ ಬ್ರಹ್ಮ ರಥೋತ್ಸವ

Date:

Advertisements

ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ನಡೆದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಐದು ದಿನಗಳ ಕಾಲ ವಿವಿಧ ಕೈಂಕರ್ಯಗಳಿಂದ ನಡೆಯುವ ಜಾತ್ರೆಯಲ್ಲಿ ಸ್ವಸ್ತಿ ವಾಚನ, ಮೃತಿಕಾ ಸಂಗ್ರಹಣ, ಅಂಕುರಾರ್ಪಣ ಹಾಗೂ ಧ್ವಜಾರೋಹಣದೊಂದಿಗೆ ಜಾತ್ರೆಯಲ್ಲಿ ಕಳೆದ ಶನಿವಾರ ಸಂಜೆ ಗರುಡೋತ್ಸವ ನಡೆದಿತ್ತು. ಶ್ರೀರಾಮನವಮಿ ಪ್ರಯುಕ್ತ ಮಂಟಪ ಪಡಿ ಪೂಜೆ ಕಾರ್ಯ ನಡೆದು ನಂತರ ಗಜೇಂದ್ರ ಮೋಕ್ಷ ಹಾಗೂ ಸೀತಾ ಕಲ್ಯಾಣೋತ್ಸವ ವಿಧಿವತ್ತಾಗಿ ಜರುಗಿತ್ತು.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಲ್ಲುವ ಅಭಿಜಿನ್ ಮೂಹೂರ್ತದಲ್ಲಿ ಬೇಟೆರಾಯಸ್ವಾಮಿಯ ಬ್ರಹ್ಮ ರಥೋತ್ಸವ ನಂತರ ಅನ್ನ ಸಂತರ್ಪಣೆ ಭಕ್ತಾದಿಗಳ ನೆರವಿನಿಂದ ಸಮಿತಿ ಆಯೋಜಿಸಿತ್ತು. ಸಂಜೆ ಉಯ್ಯಾಲೋತ್ಸವ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಸಂಜೆ ಸೀತಾಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರ ಹಾಗೂ ಶಯನೋತ್ಸವ, ಏಪ್ರಿಲ್ 9 ಬುಧವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅವಭೃತ ಸ್ನಾನ, ವಸಂತ ಮಾಧವ ಪೂಜೆ ನಡೆದು ಸಂಜೆ ಹನುಮಂತೋತ್ಸವ ಧ್ವಜಾವರೋಹಣ ಮೂಲಕ ಜಾತ್ರೆ ಸಂಪನ್ನ ಗೊಳ್ಳಲಿದೆ.

Advertisements

ರಥೋತ್ಸವ ಸಮಯದಲ್ಲಿ ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ಜೆಡಿಎಸ್ ಮುಖಂಡರಾದ ಬೆಟ್ಟಸ್ವಾಮಿ, ಹೊನ್ನಗಿರಿಗೌಡ, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಆರ್.ಶಿವಕುಮಾರ್, ಕೃಷ್ಣಮೂರ್ತಿ, ಸವಿತಾ.ಎಸ್.ಗೌಡ, ಕಂದಾಯ ನಿರೀಕ್ಷಕ ಕುಮಾರ್, ದೇವಾಲಯ ಜಾತ್ರಾ ಸಮಿತಿ ಅಧ್ಯಕ್ಷ ಸಿ.ಎಸ್.ಅರುಣ್, ಎಚ್.ಕೆ.ಸತ್ಯನಾರಾಯಣ, ಜಿ.ಸತೀಶ್, ಜಿ.ಆರ್.ಶ್ರೀನಿವಾಸಪ್ರಸಾದ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X