ಗುಬ್ಬಿ | ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಾರ್ಚ್ 5 ರಿಂದ ಆರಂಭ : 9 ರಂದು ರಥೋತ್ಸವ

Date:

Advertisements

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 5 ರಿಂದ 23 ರವರೆಗೆ ಜರುಗಲಿದೆ. ಮಾರ್ಚ್ 5 ರಂದು ಧ್ವಜಾರೋಹಣ, 9 ರಂದು ರಥೋತ್ಸವ, 14 ರಂದು ಬೆಳ್ಳಿ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆಯಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ತಿಳಿಸಿದೆ.

ಮಾರ್ಚ್ 5 ರ ಸಂಜೆ ನಡೆಯುವ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 18 ದಿನಗಳ ಕಾಲ ನಿರಂತರ ನಡೆಯುವ ಈ ಜಾತ್ರೆಗೆ ದೇಶದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ಸಾಕ್ಷಿಯಾಗಲಿದ್ದಾರೆ. ಮಾರ್ಚ್ 9 ರಥೋತ್ಸವ ಮಧ್ಯಾಹ್ನ 1.45 ಕ್ಕೆ ಜರುಗಲಿದೆ. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಲಿದ್ದು ಬಿರು ಬಿಸಿಲಿನ ನಡುವೆ ಪಾನಕ, ಫಲಾಹಾರ ಸಂಘ ಸಂಸ್ಥೆಗಳು ನೀಡಲಿದೆ. ನಿರಂತರ ದಾಸೋಹ ಇಡೀ ದಿನ ನಡೆಸಲು ಸಮಿತಿ ವ್ಯವಸ್ಥೆ ಮಾಡಿದೆ.

1001127698

ಮಾರ್ಚ್ 14 ರ ರಾತ್ರಿ ಬೆಳ್ಳಿ ಪಲ್ಲಕ್ಕಿ ಉತ್ಸವ ಕೂಡಾ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ಅಂದು ರಾತ್ರಿ ಮೂರ್ತಿ ದಾಸೋಹ ವ್ಯವಸ್ಥೆ ವಿಶೇಷವಾಗಿ ನಡೆಸಲಾಗುವುದು. ಈ ನಡುವೆ ಮಾರ್ಚ್ 11 ರಂದು ನಾಟಕರತ್ನ ಡಾ.ಗುಬ್ಬಿ ವೀರಣ್ಣ ಅವರ ಕುಟುಂಬದವರಿಂದ ಪ್ರತಿ ವರ್ಷದಂತೆ ವಿಚಿತ್ರ ಮಂಟಪ ಉತ್ಸವ ಸೇವೆ ನಡೆಯಲಿದೆ.

Advertisements

ನಿತ್ಯ ಬಸವ ವಾಹನ ಉತ್ಸವ ನಡೆಯುವ ಈ ಜಾತ್ರೆಯು ಮಾರ್ಚ್ 20 ರಂದು ತೆಪ್ಪೋತ್ಸವ ಮೂಲಕ ಅಂತಿಮ ಘಟ್ಟ ತಲುಪಲಿದೆ. ಮಾರ್ಚ್ 23 ರಂದು ಚೆನ್ನಶೆಟ್ಟಿಹಳ್ಳಿ ಗದ್ದುಗೆಗೆ ಸ್ವಾಮಿಯ ಉತ್ಸವ ಅದ್ದೂರಿಯಾಗಿ ತಲುಪಿ ನಂತರ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ಮರಳಿ ಬರುವ ಮೂಲಕ ಜಾತ್ರೆಯು ಸಂಪನ್ನಗೊಳ್ಳಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X