ಗುಬ್ಬಿ | ಗಾಳಿ ಬೆಳಕಿಗೆ ತೆರಿಗೆ ಬಾಕಿ ಇದೆ ; ತುರುವೇಕೆರೆ ಶಾಸಕ ಕೃಷ್ಣಪ್ಪ ವ್ಯಂಗ್ಯ

Date:

Advertisements

ಗ್ಯಾರಂಟಿ ಯೋಜನೆಗೆ ಹಣ ಹೊಂಚಲಾಗದೆ ಅಭಿವೃದ್ದಿ ಕೆಲಸಗಳನ್ನೇ ಪಕ್ಕಕ್ಕೆ ತಳ್ಳಿ ಎಲ್ಲದಕ್ಕೂ ತೆರಿಗೆ ವಿಧಿಸಿ ಸರ್ಕಾರ ನಡೆಸಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು, ನೀರು ಎಲ್ಲದಕ್ಕೂ ತೆರಿಗೆ ಹಾಕಿ ಉಳಿದ ಗಾಳಿ ಬೆಳಕಿಗೆ ತೆರಿಗೆ ಬಾಕಿ ಇದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ನೀಲೇಗೌಡನಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಹರಿಸುವ 22 ಲಕ್ಷ ರೂಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕೇಂದ್ರದ ಅನುದಾನದ ಕೆಲಸಗಳು ಮಾತ್ರ ಎಲ್ಲಡೆ ನಡೆದಿದೆ. ರಾಜ್ಯ ಸರ್ಕಾರ ಒಂದು ರೂಪಾಯಿ ಅನುದಾನ ನೀಡುತ್ತಿಲ್ಲ. ಜನರ ಅಭಿವೃದ್ದಿ ಪ್ರಶ್ನೆಗೆ ಉತ್ತರ ನೀಡಲಾಗುತ್ತಿಲ್ಲ. ಹೀಗೆ ಜನರಿಗೆ ಬೇಸರ ತಂದ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಆಗಿದೆ ಎಂದು ಕಿಡಿಕಾರಿದರು.

ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಕಾಂಗ್ರೆಸ್ ಈಗ ಅವರು ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದ ಅವರು 2006 ರ ಪ್ರಕರಣ, ಕೋವಿಡ್ ಲೆಕ್ಕಾಚಾರ ಹೀಗೆ ದ್ವೇಷ ರಾಜಕಾರಣ ಆರಂಭಿಸಿ ಮೂಡಾ ಹಗರಣ ಮುಚ್ಚುವ ಅಥವಾ ವಿಷಯಾಂತರ ಮಾಡುವ ಕೆಲಸ ಮಾಡುತ್ತಿದೆ. ಈ ಹಿಂದೆ ಹೊಂದಾಣಿಕೆ ರಾಜಕೀಯ ಮಾಡಿದ್ದ ಕಾಂಗ್ರೆಸ್ ಈಗ ದ್ವೇಷ ಆರಂಭಿಸಿದೆ. ಇವೆಲ್ಲವನ್ನೂ ಜನರೇ ಹತ್ತಿರದಿಂದ ಗಮನಿಸುತ್ತಿದ್ದಾರೆ ಎಂದರು.

Advertisements

ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಹೇಳಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಅಂಥಹ ಭ್ರಷ್ಟಚಾರ ಕಂಡಿಲ್ಲ. ಯಾವುದೇ ಅಕ್ರಮ ಕಂಡಲ್ಲಿ ತನಿಖೆಗೆ ನಾನೇ ಶಿಫಾರಸ್ಸು ಮಾಡುತ್ತೇನೆ ಎಂದ ಅವರು ನ್ಯಾಯಾಲಯದಲ್ಲಿ ನಡೆದಿರುವ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ವಕೀಲರು ಈಗಾಗಲೇ ವಾದ ಮಂಡಿಸಿದ್ದಾರೆ. ಮುಂದಿನ ನ್ಯಾಯಾಲಯ ಆದೇಶಕ್ಕೆ ಎಲ್ಲರೂ ತಲೆ ಬಾಗಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬೋರಪ್ಪನಹಳ್ಳಿ ಕುಮಾರ್, ಹೋಬಳಿ ಅಧ್ಯಕ್ಷ ಜಗದೀಶ್, ಹೋಬಳಿ ಯುವ ಘಟಕ ಅಧ್ಯಕ್ಷ ನವೀನ್ ಕುಮಾರ್, ಮಾಜಿ ತಾಪಂ ಸದಸ್ಯ ಸಿದ್ದರಾಮಯ್ಯ, ಗ್ರಾಪಂ ಸದಸ್ಯೆ ಲಾವಣ್ಯ, ಮುಖಂಡರಾದ ದೊಡ್ಡೇಗೌಡ, ಶಿವಗಂಗಣ್ಣ, ಶಿವರಾಜ್, ಸಿದ್ದೇಗೌಡ, ಗುತ್ತಿಗೆದಾರ ಚಿಕ್ಕರಾಜು ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X