ಗುಬ್ಬಿ | ಅದ್ದೂರಿ ದಿಂಡಿ ಉತ್ಸವ : ಇತಿಹಾಸ ಸೃಷ್ಟಿಸಿದ ಮೆರವಣಿಗೆ

Date:

Advertisements

ಆಷಾಢ ಮಾಸದ ಏಕಾದಶಿ ಹಿನ್ನಲೆ ಗುಬ್ಬಿಯಲ್ಲಿ ನಡೆದ 21 ನೇ ವರ್ಷದ ದಿಂಡಿ ಉತ್ಸವದ ಅಂಗವಾಗಿ ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ಅಡಿಗಳ ಎತ್ತರದ ಕಟೌಟ್ ಗೆ ಹಾಲಿನ ಅಭಿಷೇಕ ಹಾಗೂ ಪುಷ್ಪಾರ್ಚನೆಯನ್ನು ದಾನಿಗಳಾದ ನಾಗರತ್ನಬಾಯಿ ಜ್ಞಾನೇಶ್ವರ್ ರಾವ್ ಮತ್ತು ಮಕ್ಕಳು ಅವರು ಅದ್ದೂರಿಯಾಗಿ ನಡೆಸಿದರು.

ಗುಬ್ಬಿ ಪಟ್ಟಣದ ಪಾಂಡುರಂಗ ಸ್ವಾಮಿ ಅವರ ದೇವಾಲಯದಿಂದ ಊರಿನ ಪ್ರಮುಖ ರಸ್ತೆಯಲ್ಲಿ ಪ್ರತಿ ವರ್ಷ ಮೆರವಣಿಗೆ ಸೇವೆ ನಡೆಸಿರುವ ದಾನಿಗಳಾದ ನಾಗರತ್ನ ಬಾಯಿ ಹಾಗೂ ಅವರ ಮಕ್ಕಳು ಈ ಬಾರಿ 20 ಲಕ್ಷ ಹಣದಲ್ಲಿ ಅದ್ದೂರಿ ದಿಂಡಿ ಉತ್ಸವ ಅತ್ಯಾಕರ್ಷಕವಾಗಿ ನಡೆಸಿದರು. ಮೆರವಣಿಗೆ ಪಟ್ಟಣದಲ್ಲಿ ಇತಿಹಾಸ ಸೃಷ್ಟಿಸಿದೆ. ಈ ಬಾರಿ 21 ಅಡಿಗಳ ಕಟೌಟ್ ಹಾಗೆಯೇ ಕ್ರೇನ್ ಬಳಸಿ ಹಾಲಿನ ಅಭಿಷೇಕ ಸಾವಿರಾರು ಭಕ್ತರ ಗಮನ ಸೆಳೆಯಿತು.

ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ನಡೆಯಿತು. ನಂತರ ಶ್ರೀ ಪಾಂಡುರಂಗಸ್ವಾಮಿ ಶ್ರೀ ರುಕ್ಮಿಣಿ ದೇವಿಯ ಅದ್ದೂರಿ ಮೆರವಣಿಗೆ ಊರಿನ ರಾಜ ಬೀದಿಗಳಲ್ಲಿ ಹೆಸರಾಂತ ಬೆಳ್ತಂಗಡಿ ಸಾಂಸ್ಕೃತಿಕ ಕಲಾ ಮೇಳದೊಂದಿಗೆ ಜರುಗಿತು.

Advertisements

ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ವಾಸುದೇವರಾವ್, ಕಾರ್ಯದರ್ಶಿ ಚಂದನ್, ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಮಹೇಶ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X