ಗುಬ್ಬಿ | ಗೂಗಲ್ ಲೊಕೇಶನ್ ಬಳಸಿ ಕಳ್ಳತನ : ಖತರ್ನಾಕ್ ಕಳ್ಳರ ಬಂಧನ

Date:

ಗೂಗಲ್ ಲೊಕೇಶನ್ ಬಳಸಿ ನಿಯರೆಸ್ಟ್ ಟೆಂಪಲ್ ಫಾರ್ ಮಿ ಎಂದು ಸರ್ಚ್ ಮಾಡಿ ಹತ್ತಿರದ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿ.ಎಸ್.ಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.

- Advertisement -

ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ.ಕೊಡಗೇಹಳ್ಳಿ ಗ್ರಾಮದ ಕೋಡಿಕೆಂಪಮ್ಮ ದೇವಸ್ಥಾನದ ಬಾಗಿಲು ಬೀಗ ಮುರಿದು ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಲು ದೇವಸ್ಥಾನದ ಒಳಗೆ ಹೋಗಿ ಹುಂಡಿಯನ್ನು ಹೊರಗಡೆ ತಂದಾಗ ಗ್ರಾಮಸ್ಥರ ಕೂಗಾಟ ಕೇಳಿಸಿಕೊಂಡ ಕಳ್ಳರು ಹುಂಡಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ದೇವಸ್ಥಾನದ ಬಳಿ ಬಿಟ್ಟು ಓಡಿ ಹೋಗಿದ್ದ ಪ್ರಕರಣ ಭೇದಿಸಿದ್ದ ಸಿ.ಎಸ್.ಪುರ ಪೊಲೀಸರು ಖತರ್ನಾಕ್ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಬಂದಿತ ಆರೋಪಿಗಳನ್ನ ನರಸಿಂಹಮೂರ್ತಿ(21) ವರ್ಷ ಮತ್ತೊಬ್ಬ ನಾಗರಾಜು(18) ಎನ್ನಲಾಗಿದೆ. ಇಬ್ಬರು ವ್ಯಕ್ತಿಗಳ ವಿಳಾಸ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೋಕಿನ ಕಾರೆಹಳ್ಳಿ ಮಜರೇ ಬೊಮ್ಮನಹಳ್ಳಿ ಗ್ರಾಮ ಎಂದು ತಿಳಿದು ಬಂದಿದೆ. ಇಬ್ಬರ ತಂದೆಯ ಹೆಸರು ವಸಂತಕುಮಾರ್ ಎಂದು ಇದ್ದು ಇಬ್ಬರು ಸಹೋದರರು ಎನ್ನಲಾಗುತ್ತಿದೆ.

ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಮೊದಲಿಗೆ ಕಳ್ಳತನಕ್ಕೆ ಬಳಸಿದ್ದ ಕೆಎ 02 ಎಡಿ 6543 ಎಂಬ ಕಾರಿನ ಮಾಲೀಕರ ವಿಳಾಸ ಸಂಗ್ರಹಿಸಿ ಪ್ರಕರಣ ಕೈಗೆತ್ತಿಕೊಂಡ ಇಬ್ಬರು ಆರೋಪಿಗಳನ್ನ ದಸ್ತಗಿರಿ ಮಾಡಿ ವಿಚಾರ ಮಾಡಲಾಗಿ ಆರೋಪಿತರು ಗೂಗಲ್ ಲೊಕೇಶನ್ ನಲ್ಲಿ ಟೆಂಪಲ್ ನಿಯರ್ ಫಾರ್ ಮಿ ಎಂದು ಸರ್ಚ್ ಮಾಡಿ ಊರುಗಳಿಂದ ಹೊರಗಡೆ ಒಂಟಿಯಾಗಿರುವ ಮತ್ತು ಭದ್ರತೆ ಇಲ್ಲದಿರುವ ಹುಂಡಿ ಹೊಡೆದರೆ ಅಲ್ಲಿ ಹಣ ಇದ್ದೇ ಇರುತ್ತೆ ಎಂದು ತಿಳಿದು ದೇವಸ್ಥಾನದ ಹುಂಡಿ ಹಣ ಮತ್ತು ದೇವರ ಒಡವೆಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಜೊತೆಗೆ ದೇವಸ್ಥಾನಗಳಲ್ಲಿ ಹುಂಡಿ ಕಳ್ಳತನ ಮಾಡಿದ್ದ ಹಣದಿಂದ ಮೇಲ್ಕಂಡ ಕೆಎ 02 ಎಡಿ 6543 ಎಂಬ ಟೊಯೋಟೊ ಇಟಿಯೋಸ್ ಕಾರನ್ನು ಖರೀದಿ ಮಾಡಿ ಕಳ್ಳತನಗಳಿಗೆ ಬಳಸುತ್ತಿದ್ದು ಎಂಬುದು ತಿಳಿಯುವುದರ ಜೊತೆಗೆ ಈ ಕಾರ್ಯಾಚರಣೆಯಿಂದ ಸಿ.ಎಸ್.ಪುರ ಪೊಲೀಸ್ ಠಾಣೆ ಸೇರಿದಂತೆ ಗುಬ್ಬಿ ಮತ್ತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಗಳಿಗೆ ಸೇರಿದ ಒಟ್ಟು ಎಂಟು ಪ್ರಕರಣಗಳನ್ನು ಭೇದಿಸುವಲ್ಲಿ ಸಿ.ಎಸ್.ಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿರಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರಾದ ಬಿ.ಕೆ.ಶೇಖರ್ ಅವರ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತದ ಸಿಪಿಐ ರಾಘವೇಂದ್ರ.ಟಿ.ಆರ್ ನೇತೃತ್ವದ ಸಿ.ಎಸ್ ಪುರ ಪಿಎಸ್ಐ ಶಿವಕುಮಾರ್ ತಂಡದಲ್ಲಿ ಸಿಬ್ಬಂದಿಗಳಾದ ಸಿದ್ದರಾಜು, ರಾಜು, ವಿಜಯಕುಮಾರ್,ಮತ್ತು ಭೀಮೇಶ್ ಎಂಬ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಪ್ರಶಂಸಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಮಧುಗಿರಿ | ಪರಂಪರೆ ಮತ್ತು ಐತಿಹಾಸಿಕ ಮಹತ್ವ ಅರಿಯುವುದು ಯುವಜನರ ಜವಾಬ್ದಾರಿ : ಡಾ. ಎಸ್.ವಿ. ವೆಂಕಟೇಶಯ್ಯ

ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...