ಗುಬ್ಬಿ | ಜಾನಪದ ಉತ್ಸವದಲ್ಲಿ ಉತ್ಸುಕತೆಯೇ ಇಲ್ಲ : ರಂಗಭೂಮಿ ಕಲಾವಿದೆ ಬಿ.ಜಯಶ್ರೀ ವಿಷಾದ

Date:

Advertisements

ಜಾನಪದ ಉತ್ಸವದಲ್ಲಿ ಜಾನಪದ ಹಾಡುಗಳು ಇಲ್ಲದೆ ಕೇವಲ ಚಲನಚಿತ್ರ ಗೀತೆಗಳಿಗೆ ಮಾರುಹೋದರೆ ಇಂದಿನ ಕಾರ್ಯಕ್ರಮ ಹೇಗೆ ಅರ್ಥ ಗಳಿಸುತ್ತದೆ. ಮೊಬೈಲ್ ನಲ್ಲಿ ನಿರತರಾಗಿರುವ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಸ್ಕಾರ ಕಾಣದಿರುವುದು ಬೇಸರ ಮೂಡಿಸಿದೆ ಎಂದು ರಂಗಕಲಾವಿದೆ ಶ್ರೀಮತಿ ಬಿ.ಜಯಶ್ರೀ ದೇವಿ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜಾನಪದ ಉತ್ಸವ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಜಾನಪದ ಉತ್ಸವ ಎಂಬ ಎಂಬ ಅಭೂತಪೂರ್ವ ಕಾರ್ಯಕ್ರಮ ಮಾಡಿ ಕೇವಲ ಚಲನಚಿತ್ರ ಗೀತೆಗಳ ಜೊತೆಗೆ ವಾದ್ಯಗೋಷ್ಠಿ ಮಾಡಿ ತಾವೆಲ್ಲರೂ ಕುಣಿದು ಕುಪ್ಪಳಿಸುವ ಕೆಲಸ ಮಾಡುವುದು ಸರಿಯಲ್ಲ. ಜಾನಪದಕ್ಕೆ ಅರ್ಥ ನೀಡುವ ಕಾರ್ಯಕ್ರಮ ಎನಿಸಲಿಲ್ಲ ಎಂದು ವಿಷಾದಿಸಿದರು.

1001203028

ಜಾನಪದ ಉತ್ಸವದಲ್ಲಿ ಹಾಡು, ಕಲೆ,ಸೋಬಾನೆ ಪದಗಳ ಮೂಲಕ ಜಾನಪದ ಸೊಗಡನ್ನು ಬಿಂಬಿಸುವ ಕಾರ್ಯಕ್ರಮ ಇದಾಗದಿರುವುದು ಬೇಸರ ಮೂಡಿಸಿದೆ. ಯಾರು ಏನೇ ಬೈದು ಕೊಂಡರು ನನಗೆ ಬೇಸರವಿಲ್ಲ, ಐ ಡೊಂಟ್ ಕೇರ್ ಎಂದ ಅವರು ಸೊಗಡಿನ ಕಂಪನ್ನು ಪಸರಿಸುವ ಕೆಲಸವನ್ನು ಮಾಡದಿರುವ ಬಗ್ಗೆ ಎಚ್ಚೆತ್ತು ಮುನ್ನಡೆಯಬೇಕಿದೆ ಎಂದರು.

Advertisements

ನಾಟಕ ರಂಗಭೂಮಿ ಸೇರಿದಂತೆ ಜಾನಪದ ಸೊಗಡನ್ನು ಉಳಿಸುವ ನಿಟ್ಟಿನಲ್ಲಿ ಸಂಸ್ಕೃತಿ ಮತ್ತು ಪರಂಪರೆಯನ್ನು ಹಿಂದಿನ ಪೀಳಿಗೆ ಉಳಿಸುವ ಕೆಲಸ ಮಾಡಬೇಕಿದೆ. ಆಗ ಮಾತ್ರ ನಮ್ಮ ಕಲೆ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ಈ ಕಾರ್ಯಕ್ರಮ ನಾನೇ ನಿರ್ವಹಣೆ ಮಾಡಿದ್ದರೆ ಎಲ್ಲಾ ಜನಪದ ಶೈಲಿ ಮೆಳೆಸುವಂತೆ ಮಾಡುತ್ತಿದ್ದೆ. ಕೇವಲ ಹೆಣ್ಣು ಮಕ್ಕಳು ಮಾತ್ರ ಅಲಂಕಾರ ಮಾಡಿಕೊಂಡು ಗಂಡು ಮಕ್ಕಳು ಜೀನ್ಸ್ ಪ್ಯಾಂಟ್ ಧರಿಸಿರುವುದು ಉತ್ಸವದ ಅರ್ಥ ಕಳೆದುಕೊಂಡಿದೆ ಎಂದರು.

1001203027

ಪ್ರಾಂಶುಪಾಲ ಪ್ರಸನ್ನಕುಮಾರ್ ಮಾತನಾಡಿ ನಿಮ್ಮ ಈ ಶಿಸ್ತು ಸಂಸ್ಕಾರ ಮತ್ತು ಮೊಬೈಲ್ ಗೀಳಿನ ನಡೆ ಕಂಡು ಅಥಿತಿಯಾಗಿ ಕಾರ್ಯಕ್ರಮದ ಉದ್ಘಾಟನೆಗೆ ಬಂದಿದ್ದ ಜಯಶ್ರೀ ಅಮ್ಮನವರು ತುಂಬಾ ಬೇಸರ ಮಾಡಿಕೊಂಡಿದ್ದಾರೆ. ಮತ್ತೆ ಹೇಗೆ ಕಾರ್ಯಕ್ರಮಕ್ಕೆ ಅವರನ್ನು ಕರೆಯೋದು ಎಂದು ವಿದ್ಯಾರ್ಥಿಗಳಿಗೆ ಪ್ರಶ್ನಿಸಿ ಕಾರ್ಯಕ್ರಮದಲ್ಲಿ ಶೋಭೆ ತರುವ ಕೆಲಸ ಮಾಡಲು ತಿಳಿ ಹೇಳಿದರು.

ಉತ್ಸವದಲ್ಲಿ ಹಳ್ಳಿಗಾಡಿನ ವಾತಾವರಣವನ್ನು ಕಾಲೇಜು ಆವರಣದಲ್ಲಿ ಸೃಷ್ಟಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಮಟೆ ನರಸಮ್ಮ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X