ಗುಬ್ಬಿ | ಗ್ರಾಪಂ ಆಡಳಿತಕ್ಕೆ ಜೂನ್ 18 ರಂದು ತರಬೇತಿ ಕಾರ್ಯಾಗಾರ : ತಾಪಂ ಇಒ ಶಿವಪ್ರಕಾಶ್

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ವಿಷಯಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಇದೇ ತಿಂಗಳ 18 ರಂದು ಪಟ್ಟಣದ ಎಸ್ ಸಿ ಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತಾಪಂ ಇಓ ಶಿವಪ್ರಕಾಶ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ತಾಲ್ಲೂಕಿನ ಒಟ್ಟು 34 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ತರಬೇತಿ ನೀಡಲು ಈ ಕಾರ್ಯಾಗಾರ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಚುನಾಯಿತ ಪಂಚಾಯಿತಿ ಜನಪ್ರತಿನಿಧಿಗಳು ಭಾಗವಹಿಸಲು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಮೂಲಕ ಗ್ರಾಮ ಪಂಚಾಯಿತಿ ತನ್ನೆಲ್ಲಾ ಸಂಪನ್ಮೂಲ ಕ್ರೋಢೀಕರಣ ಹಾಗೂ ಸದ್ಭಳಕೆ ಬಗ್ಗೆ ಚರ್ಚಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆ, ಮೂಲಭೂತ ಸವಲತ್ತುಗಳು, ಹಣಕಾಸು ಯೋಜನೆ ಹೀಗೆ ಅನೇಕ ವಿಚಾರ ಪ್ರಸ್ತಾಪದ ಜೊತೆ ಪಂಚಾಯತ್ ಕಾನೂನು ಬಗ್ಗೆ ಸಹ ಅರಿವು ಮೂಡಿಸಲಾಗುವುದು. ಈ ಕಾರ್ಯಕ್ರಮಕ್ಕೆ ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಂ.ಟಿ.ಕೃಷ್ಣಪ್ಪ, ಜಿಪಂ ಸಿಇಓ ಜಿ.ಪ್ರಭು ಉಪಸ್ಥಿತರಿರುತ್ತಾರೆ ಎಂದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X