ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ತುಳಸಿದಾಸ್ ಅವಿರೋಧ ಆಯ್ಕೆ

Date:

Advertisements

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ ಅಶ್ವತ್ತೇಗೌಡ ನೀಡಿದ ರಾಜೀನಾಮೆ ಹಿನ್ನಲೆ ತೆರವಾದ ಸಾಮಾನ್ಯ ಮೀಸಲು ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿ ಸುರಿಗೇನಹಳ್ಳಿ ಸದಸ್ಯ ತುಳಸಿದಾಸ್ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷ ತುಳಸಿದಾಸ್ ಮಾತನಾಡಿ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಅಭಿವೃದ್ದಿ ವಿಚಾರದಲ್ಲಿ ಒಕ್ಕೊರಲಿನ ಅಭಿಪ್ರಾಯ ಪಡೆದು ಮಾದರಿ ಗ್ರಾಮ ಪಂಚಾಯಿತಿ ಹೆಗ್ಗಳಿಕೆಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗ್ರಾಮೀಣ ಭಾಗದಲ್ಲಿ ಅವಶ್ಯ ರಸ್ತೆ, ನೀರು, ಬೀದಿ ದೀಪ ಒದಗಿಸಿ ಚುನಾಯಿತ ಪ್ರತಿನಿಧಿಗಳ ಮೂಲಕ ಸರ್ಕಾರದ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದರು.

Advertisements

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಉಪಾಧ್ಯಕ್ಷ ರಂಗರಾಜು, ಸದಸ್ಯರಾದ ಗಂಗನರಸಮ್ಮ, ಜಯಮ್ಮ, ಶಾಂತಲ, ವೆಂಕಟಲಕ್ಷ್ಮಮ್ಮ, ಅಂಬುಜಮ್ಮ, ನೀಲಮ್ಮ, ಧನಲಕ್ಷ್ಮಿ, ಅನಿತಾ, ಶಿವಣ್ಣ, ಶ್ವೇತಾ, ಮಂಜಮ್ಮ, ರಾಮೇಗೌಡ, ನಾಗರಾಜು, ಪ್ರೇಮಾ, ಸೈಯದ್ ಖಲಂದರ್, ಭಾರತಿ, ಮುಖಂಡರಾದ ಸು.ಮುನಿಯಪ್ಪ, ಕೆ.ಸಿ.ಗಿರೀಶ್ ಪಾಂಡುರಂಗಯ್ಯ, ದಿವಾಕರ್, ರಂಗನಾಥ್ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X