ಗುಬ್ಬಿ | ಮೈಸೂರು ದಸರಾ ಮಾದರಿಯಲ್ಲೇ ಅದ್ದೂರಿ ತುಮಕೂರು ದಸರಾ ಉತ್ಸವ : ತಹಶೀಲ್ದಾರ್ ಬಿ.ಆರತಿ

Date:

Advertisements

ವಿಶ್ವ ವಿಖ್ಯಾತಿ ಮೈಸೂರು ದಸರಾ ವೈಭವದಷ್ಟೇ ಮಾದರಿ ತುಮಕೂರು ದಸರಾ ಉತ್ಸವ ಅದ್ದೂರಿಯಾಗಿ ಚಾಲ್ತಿ ದೊರಕಿದ್ದು ಪ್ರತಿ ನಿತ್ಯ ಧಾರ್ಮಿಕ ಉತ್ಸವಗಳು, ನವರಾತ್ರಿ ಉತ್ಸವಗಳು, ವಿಶೇಷ ಅಲಂಕಾರ, ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವಿಶೇಷವಾಗಿ ಇದೇ ತಿಂಗಳ 11 ಮತ್ತು 12 ರಂದು ಅತ್ಯಾಕರ್ಷಣೆಯ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ಸಾವಿರಾರು ಸಂಖ್ಯೆಯ ಮಂದಿ ಈ ತುಮಕೂರು ದಸರಾ ಉತ್ಸವಕ್ಕೆ ಭಾಗವಹಿಸಲಿದ್ದು ಗುಬ್ಬಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಹತ್ತು ದಿನಗಳ ಕಾರ್ಯಕ್ರಮದಲ್ಲಿ ಇದೇ ತಿಂಗಳ 6 ರಂದು ವಿಶೇಷ ದೀಪಾಲಂಕಾರ ಇಡೀ ತುಮಕೂರು ನಗರದಲ್ಲಿ ಕಂಗೊಳಿಸಲಿದೆ. ಪ್ರಮುಖ ರಸ್ತೆಗಳು, ವೃತ್ತಗಳು, ದೇವಾಲಯಗಳು ಸಂಜೆ ವಿದ್ಯುದ್ದೀಪಳಿಂದ ಅಲಂಕಾರಗೊಂಡು ಜನರನ್ನು ಆಕರ್ಷಿಸಲಿದೆ. ಅದೇ ದಿನ ಸ್ಟೇಡಿಯಂನಲ್ಲಿ ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ದಸರಾ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂಜೆ ಯುವ ಸಂಭ್ರಮ ಮತ್ತು ಆಹಾರ ಮೇಳ ನಡೆಯಲಿದೆ ಎಂದು ವಿವರಿಸಿದರು.

1000520295

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮುಖ್ಯ ವೇದಿಕೆ ನಿರ್ಮಾಣವಾಗಿದ್ದು ಇದೇ ತಿಂಗಳ 11 ರ ಶನಿವಾರ ಬೆಳಿಗ್ಗೆ 7 ಕ್ಕೆ ಹತ್ತು ಸಾವಿರ ಮಂದಿಯ ಮ್ಯಾರಥಾನ್ ಓಟ ಸ್ಟೇಡಿಯಂ ಬಳಿ ನಡೆದು ನಂತರ ನಾಡ ಕುಸ್ತಿ, ಆಹಾರ ಮೇಳ, ವಸ್ತು ಪ್ರದರ್ಶನ ಮುಖ್ಯ ವೇದಿಕೆ ಬಳಿ ನಡೆಯಲಿದೆ. ಎಚ್ ಎಎಲ್ ಹೆಲಿಕಾಪ್ಟರ್ ಶೋ, ಇಸ್ರೋ ವಿಂಟೆಜ್ ಕಾರ್ ಶೋ ವಿಶೇಷವಾಗಿ ನಡೆಯಲಿದೆ. ಸಂಜೆ 6 ಕ್ಕೆ ನಟ ಶಿವರಾಜಕುಮಾರ್ ಆಗಮನ, ಗುರುಕಿರಣ್ ಹಾಗೂ ಕಂಬದ ರಂಗಯ್ಯ ಅವರಿಂದ ರಸ ಸಂಜೆ ಕಾರ್ಯಕ್ರಮ, ಆಕರ್ಷಕ ಲೇಸರ್ ಶೋ ನಡೆಯಲಿದೆ, ಅ.12 ರ ವಿಜಯದಶಮಿ ದಿನದಂದು ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮ ನಡೆದು ಸಂಜೆ 6.30 ಕ್ಕೆ ಹಾಡುಗಾರ ವಿಜಯ್ ಪ್ರಕಾಶ್ ತಂಡದಿಂದ ಸಂಗೀತ ರಸಸಂಜೆ ಹಾಗೂ ಡ್ರೋನ್ ಮೂಲಕ ಕಾರ್ಯಕ್ರಮ ನಡೆದು ಸಮಾರೋಪ ಸಮಾರಂಭದಲ್ಲಿ ಹಸಿರು ಮದ್ದುಗಳಿಂದ ಬಾಣ ಬಿರುಸು ಪ್ರದರ್ಶನ ನಡೆಯಲಿದೆ ಎಂದರು.

Advertisements

ಮಧ್ಯಾಹ್ನ 1 ಕ್ಕೆ ಟೌನ್ ಹಾಲ್ ನಿಂದ ಮುಖ್ಯ ವೇದಿಕೆಯವರೆಗೆ ವಿಜಯದಶಮಿ ಮೆರವಣಿಗೆ ವೈಭವವಾಗಿ ಜರುಗಲಿದೆ. ಈ ಎಲ್ಲಾ ಅದ್ದೂರಿ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಬೇಕು. ತುಮಕೂರು ನಗರಕ್ಕೆ ಸಮೀಪದ ಗುಬ್ಬಿ ತಾಲ್ಲೂಕಿಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮನವಿ ಮಾಡಿ ತಾಲ್ಲೂಕಿನ ಜನಪರ ಸಂಘ ಸಂಸ್ಥೆಗಳಿಗೆ ಕರಪತ್ರ ಹಂಚಿ ಭಾಗವಹಿಸಲು ಮನವಿ ಮಾಡಲಾಗುತ್ತಿದೆ. ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಪಂ ಇಓ ಶಿವಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X