ಗುಬ್ಬಿ | ತ್ಯಾಗಟೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಓಂಕಾರ ಪ್ರಸಾದ್; ಉಪಾಧ್ಯಕ್ಷರಾಗಿ ನಳಿನಾ

Date:

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ತ್ಯಾಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎನ್.ಓಂಕಾರ ಪ್ರಸಾದ್ ಅಧ್ಯಕ್ಷರಾಗಿ ಹಾಗೂ ನಳಿನಾ ಪ್ರಕಾಶ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

- Advertisement -

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಗುಬ್ಬಿ ತಹಶೀಲ್ದಾರ್ ಬಿ.ಆರತಿಯವರು ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಶಿವಕುಮಾರಸ್ವಾಮಿ ಹಾಗೂ ಉಪಾಧ್ಯಕ್ಷೆ ವಸಂತಕುಮಾರಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರೆವಾದ ಸಾಮಾನ್ಯ ಮೀಸಲಿನ ಎರಡೂ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಚುನಾವಣಾ ಪ್ರಕ್ರಿಯೆ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ತ್ಯಾಗಟೂರು ಸದಸ್ಯ ಟಿ.ಎನ್.ಓಂಕಾರ ಪ್ರಸಾದ್ ಹಾಗೂ ಕೋಡಿ ನಾಗೇನಹಳ್ಳಿ ಸದಸ್ಯ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನಳಿನಾ ಪ್ರಕಾಶ್ ಹಾಗೂ ಕೋಡಿ ನಾಗೇನಹಳ್ಳಿ ಸದಸ್ಯೆ ಜಯಮಾಲಾ ನಾಮಪತ್ರ ಸಲ್ಲಿಸಿದ್ದರು.

ಮತ ಚಲಾವಣೆ ನಂತರ ಓಂಕಾರ ಪ್ರಸಾದ್ ಅವರಿಗೆ 11 ಮತಗಳು ಲಭಿಸಿ ಅಧ್ಯಕ್ಷರಾಗಿ ಚುನಾಯಿತರಾದರು. ಪ್ರತಿಸ್ಪರ್ಧಿ ಮಂಜುನಾಥ್ 8 ಮತಗಳನ್ನು ಪಡೆದು ಮೂರು ಮತಗಳ ಅಂತರದಿಂದ ಪರಾಭವಗೊಂಡರು.

ಉಪಾಧ್ಯಕ್ಷ ಸ್ಥಾನದಲ್ಲಿ ಸಹ ನಳಿನಾ ಪ್ರಕಾಶ್ 11 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಜಯಮಾಲಾ 8 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ತ್ಯಾಗಟೂರು

ನೂತನ ಅಧ್ಯಕ್ಷ ಟಿ.ಎನ್.ಓಂಕಾರ ಪ್ರಸಾದ್ ಸುದ್ದಿಗಾರರ ಜೊತೆ ಮಾತನಾಡಿ, “ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ, ಸರ್ಕಾರದ ಸವಲತ್ತು ತರಲು ಎಲ್ಲ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಹೊಸ ಯೋಜನೆ ಜಾರಿ ಮೂಲಕ ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾರ್ಪಾಡು ಮಾಡಲು ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಗದಗ | ನೀಟ್ ರದ್ದು ಸೇರಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಟಿ.ಎನ್.ಪರಮೇಶ್, ಮಲ್ಲಿಕಾರ್ಜುನಯ್ಯ, ನಂಜೇಗೌಡ, ಯತೀಶ್, ನಾಗರಾಜು, ಮಲ್ಲಿಕಾರ್ಜುನ್, ಪಿಡಿಓ ವನಜಾಕ್ಷಿ, ಚುನಾವಣಾ ಸಿಬ್ಬಂದಿ ಗುರುಪ್ರಸಾದ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...