ಗುಬ್ಬಿ | ಕಾರು ಪಲ್ಟಿಯಾಗಿ ಯುವಕ ಸಾವು : ಶ್ವಾನದಳ, ಬೆರಳಚ್ಚು ತಂಡದೊಂದಿಗೆ ಹಿರಿಯ ಪೊಲೀಸರ ಭೇಟಿ

Date:

Advertisements

ಕೆ.ಜಿ.ಟೆಂಪಲ್ ನತ್ತ ಬರುತ್ತಿದ್ದ ಟೊಯೊಟಾ ಕಂಪನಿಯ ಇಟಿಯೋಸ್ ಕಾರು ಜಿ.ಹೊಸಹಳ್ಳಿ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಜೀಗನಹಳ್ಳಿ ಗ್ರಾಮದ ಯುವಕ ರಾಕೇಶ್(32) ವ್ಯಕ್ತಿ ಅಪಘಾತದಿಂದ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಕಳೆದ ಮಂಗಳವಾರ ಸ್ನೇಹಿತರೊಂದಿಗೆ ಕಾರಿನಲ್ಲಿ ತುಮಕೂರಿಗೆ ತೆರಳಿ ಮರಳಿ ಬರುವಾಗ ತಡರಾತ್ರಿ 12 ರ ಸಮಯದಲ್ಲಿ ಜಿ.ಹೊಸಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಕ್ಕದ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ತಂತಿಗೆ ಗುದ್ದಿ ಕಾರು ಪಲ್ಟಿಯಾಗಿ ಚಾಲಕ ರಾಕೇಶ್ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Advertisements

ಅಪಘಾತ ಸಂಭವಿಸಿದ ಸ್ಥಳದ ಬಳಿ ಘಟನೆ ಬಗ್ಗೆ ಕೆಲ ಅನುಮಾನದ ಸುತ್ತ ಗುಬ್ಬಿ ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಶ್ವಾನದಳ ಸೇರಿದಂತೆ ಬೆರಳಚ್ಚು ತಜ್ಞರು ಆಗಮಿಸಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಶವಾಗಾರಕ್ಕೆ ಕೊಂಡೊಯ್ದು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ಜಿಲ್ಲಾ ಪೊಲೀಸ್ ಅಪರ ವರಿಷ್ಠಾಧಿಕಾರಿ ಮರಿಯಪ್ಪ, ಶಿರಾ ಡಿವೈಎಸ್ ಪಿ ಶೇಖರ್, ಸಿಪಿಐ ಗೋಪಿನಾಥ್, ಗುಬ್ಬಿ ಪಿಎಸ್ಐ ಸುನಿಲ್ ಕುಮಾರ್, ಸಿ.ಎಸ್.ಪುರ ಪಿಎಸ್ಐ ಶಿವಕುಮಾರ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X