ಉಡುಪಿ | ಗುಲ್ವಾಡಿ ಪ್ರಶಸ್ತಿಗೆ ಧರಣಿದೇವಿ ಮಾಲಗತ್ತಿ, ರಫೀ ಪಾಷಾ ಆಯ್ಕೆ

Date:

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರದ ಗುಲ್ವಾಡಿ ಟಾಕೀಸ್ ಮತ್ತು ಕೋಟದ ಉಸಿರು ಅಧ್ಯಯನ ಕೇಂದ್ರಗಳು ನೀಡುವ 2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು. 13 ರಂದು ಉಡುಪಿಯಲ್ಲಿ ಈ ಪ್ರಶಸ್ತಿಗಳ‍ನ್ನು ಪ್ರದಾನ ಮಾಡಲಾಗುತ್ತದೆ, ಈ ಪ್ರಶಸ್ತಿಗಳು 10 ಸಾವಿರ ರು. ನಗದು ಮತ್ತು ಸ್ಮರಣ ಫಲಕಗಳನ್ನು ಒಳಗೊಂಡಿರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1007118969


ಮೊಹಮ್ಮದ್‌ ರಫೀ ಪಾಷ ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ವಿಚಾರಗಳ ಬಗ್ಗೆ ಅಪಾರ ಕಳಕಳಿ ಹೊಂದಿರುವ ಹಿರಿಯ ಸಾಹಿತಿ. ಮೊಹಮ್ಮದ ರಫೀ ಪಾಷ ಪ್ರಸ್ತುತ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಉಪ ಆಯುಕ್ತರಾಗಿದ್ದಾರೆ. ಭಾರತೀಯ ನಾಗರೀಕ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಗಳಿಗೆ ಸೇರಬಯಸುವ ಗ್ರಾಮೀಣ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ 12ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಲಹೆ ಮಾರ್ಗದರ್ಶನ ನೀಡುತ್ತಿದ್ದಾರೆ. 2010 ರಲ್ಲಿ ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೊದಲು ದೆಹಲಿ, ಜಮ್ಮು ಮತ್ತು ಕಾಶ್ಮೀರ, ಹೈದ್ರಾಬಾದ್ ಇನ್ನಿತರ ರಾಜ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನೂರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಭರವಸೆ ಮೂಡಿಸಿದ್ದಾರೆ. ಅಮೇರಿಕಾದ ಅಕ್ಕ, ಇಂಗ್ಲೆಂಡಿನ ವಿಶ್ವ ಒಕ್ಕಲಿಗರ ವೇದಿಕೆ, ಆಸ್ಟ್ರೇಲಿಯಾದ ಕನ್ನಡ ಕೂಟ, ದುಬೈಯ ಅಂತರರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ, ದೆಹಲಿ ಕರ್ನಾಟಕ ಸಂಘದ ಪ್ರಶಸ್ತಿ ಗೌರವಗಳಿಗೆ ಪಾತ್ರರಾಗಿದ್ದಾರೆ.

ಡಾ. ಧರಣಿದೇವಿ ಮಾಲಗತ್ತಿ:
ಕವಿ, ಸಂಶೋಧಕಿ, ವಿಮರ್ಶಕಿಯಾಗಿ ಮಹಿಳಾಪರ ಚಿಂತನೆಗಳ ಮೂಲಕ ಸಹಸ್ರಾರು ಓದುಗರನ್ನ ಹೊಂದಿರುವ ಡಾ. ಧರಣಿದೇವಿ ಮಾಲಗತ್ತಿ ಮೂಲತಃ ಬಂಟ್ವಾಳದವರು. ಅಲ್ಲಿಯೇ ಬಿಕಾಂ ಪದವಿಯ ನಂತರ ಮೈಸೂರು ವಿ.ವಿ.ಯಿಂದ ನಿರ್ವಹಣಾಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದು, ಮಂಗಳೂರು, ಮೈಸೂರು ವಿ.ವಿ.ಗಳಲ್ಲಿ ಉಪನ್ಯಾಸಕರಾಗಿ ಒಂದು ದಶಕ ಕರ್ತವ್ಯ ನಿರ್ವಹಿಸಿದ್ದಾರೆ.

ಮುಂದೆ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಜಗೌ ಸಾಹಿತ್ಯ ಪ್ರಶಸ್ತಿ, ಧಾರವಾಡದ ದತ್ತಿ ಬಹುಮಾನ, ಗೋರೂರು ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗಡೆ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಅವರಿಗೆ ಸಂದಿವೆ.
ಸುದ್ದಿಗೋಷ್ಠಿಯಲ್ಲಿ ಕಸಾಪದ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹಮೂರ್ತಿ ಮತ್ತು ಗುಲ್ವಾಡಿ ಟಾಕೀಸ್‌ನ ಯಾಕೂಬ್ ಖಾದರ್ ಗುಲ್ವಾಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...